Andolana originals

ಓದುಗರ ಪತ್ರ: ನಾಲ್ವಡಿ ಅವರ ಬಗ್ಗೆ ಮಣಿಶಂಕರ್ ಅಯ್ಯರ್ ಅರಿಯಲಿ

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ನೀಡಿದಷ್ಟು ಮನ್ನಣೆಯನ್ನು ಟಿಪ್ಪು ಸುಲ್ತಾನ್ ಹಾಗೂ ಮಿರ್ಜಾ ಇಸ್ಮಾಯಿಲ್ ಅವರಿಗೆ ನೀಡಿಲ್ಲ ಎಂದು ಮೈಸೂರು ಸಾಹಿತ್ಯ ಸಂಭ್ರಮದ ೯ನೇ ಆವೃತ್ತಿ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಹೇಳಿರುವುದು ಸರಿಯಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಕನ್ನಡಿಗರಾದ ನಾವು ‘ಕೃಷ್ಣರಾಜ ಭೂಪ ಮನೆ ಮನೆ ದೀಪ’ ಹಾಗೂ ‘ಆಡು ಮುಟ್ಟದ ಸೊಪ್ಪಿಲ್ಲ , ಕೃಷ್ಣರಾಜ ಒಡೆಯರ್ ಮಾಡದ ಕೆಲಸವಿಲ್ಲ’ ಎಂಬ ಮಾತುಗಳನ್ನು ಆಗಿಂದಾಗ್ಗೆ ಕೇಳುತ್ತಾ ಇರುತ್ತೇವೆ.

ಈ ಮಾತುಗಳೇ ಅವರ ಸಾಧನೆಯನ್ನು ತಿಳಿಸುತ್ತವೆ. ಮಹಾತ್ಮ ಗಾಂಧೀಜಿ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ರಾಜರ್ಷಿ ಎಂದು ಕರೆದಿರುವುದು ಮಣಿಶಂಕರ್ ಅಯ್ಯರ್ ಅವರಿಗೆ ತಿಳಿದಿಲ್ಲವೆಂದು ಕಾಣುತ್ತದೆ. ನಾಲ್ವಡಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಣಿ ಶಂಕರ್ ಅಯ್ಯರ್ ಅವರಿಗೆ ಮಾಹಿತಿ ಕೊರತೆ ಇರಬಹುದು. ಟಿಪ್ಪು ಸುಲ್ತಾನ್ ಹಾಗೂ ಮಿರ್ಜಾ ಇಸ್ಮಾಯಿಲ್ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆಯನ್ನು ಕನ್ನಡಿಗರು ಇಂದಿಗೂ ಸ್ಮರಿಸುತ್ತಾರೆ. ಈ ಬಗ್ಗೆ ಮಣಿ ಶಂಕರ್ ಅಯ್ಯರ್ ಅವರು ಅರಿಯುವುದು ಅಗತ್ಯ.

– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.

ಆಂದೋಲನ ಡೆಸ್ಕ್

Recent Posts

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

2 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

4 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

4 hours ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

5 hours ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

8 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

8 hours ago