ಓದುಗರ ಪತ್ರ
ಮೈಸೂರು ಆಕಾಶವಾಣಿಗೆ ೯೦ ವರ್ಷಗಳು ತುಂಬಿದ್ದು, ಅಂದಿನಿಂದ ಇಂದಿನವರೆಗೂ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿ ಶ್ರೋತೃಗಳ ಮನ ಗೆದ್ದಿದೆ. ಇನ್ನು ಹತ್ತು ವರ್ಷಗಳನ್ನು ದಾಟಿದರೆ ಶತಮಾನದ ಸಂಭ್ರಮದಲ್ಲಿ ಮೈಸೂರು ಆಕಾಶವಾಣಿ ಮಿಂದೇಳುತ್ತದೆ! ‘ಮೈಸೂರು ಆಕಾಶವಾಣಿಗೆ (೯೦) ತೊಂಬತ್ತು: ನೆನಪುಗಳ ಹೊತ್ತು!’ ಕಾರ್ಯಕ್ರಮ ಆಕರ್ಷಕವಾಗಿ ಮೂಡಿ ಬಂತು. ಜೊತೆಗೆ ಸವಿ ಸವಿ ನೆನಪುಗಳನ್ನು ಮೂಡಿಸಿತು. ಮೈಸೂರು ಆಕಾಶವಾಣಿ ಕೇವಲ ಮನರಂಜನೆಯಷ್ಟೇ ಅಲ್ಲದೆ, ಮಾಹಿತಿಯನ್ನೂ ಕೂಡ ನೀಡುತ್ತಾ ಬರುತ್ತಿದೆ. ಈ ನಿಟ್ಟಿನಲ್ಲಿ ಹಿಂದೆ ಪ್ರಸಾರವಾದ ಅನೇಕ ಕಾರ್ಯಕ್ರಮಗಳು, ಜೊತೆಗೆ ನವ ನವೀನ ಕಾರ್ಯಕ್ರಮಗಳು, ಯುವಜನತೆಗೆ, ವೃದ್ಧರಿಗೆ, ಕೃಷಿಕರಿಗೆ, ಮಹಿಳೆಯರಿಗೆ ಉಪಯುಕ್ತವಾದ ಕಾರ್ಯಕ್ರಮಗಳ ಮೂಲಕ ಎಲ್ಲ ವರ್ಗದವರನ್ನೂ ತನ್ನತ್ತ ಸೆಳೆದಿದೆ. ಆಕಾಶವಾಣಿ ನಿರ್ದೇಶಕರಿಗೆ, ಕಾರ್ಯಕ್ರಮ ಅಧಿಕಾರಿಗಳಿಗೆ, ತಂತ್ರಜ್ಞರಿಗೆ, ಕಲಾವಿದರಿಗೆ, ಜೊತೆಗೆ ಕೇಳುಗ ವರ್ಗಕ್ಕೂ ವಿಶೇಷ ಅಭಿನಂದನೆಗಳು.
-ಕಾಳಿಹುಂಡಿ ಶಿವಕುಮಾರ್, ಮೈಸೂರು
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…