Andolana originals

ಓದುಗರ ಪತ್ರ: ಮಾಹಿತಿಗಳ ಕಣಜ ಮೈಸೂರು ಆಕಾಶವಾಣಿ

ಮೈಸೂರು ಆಕಾಶವಾಣಿಗೆ ೯೦ ವರ್ಷಗಳು ತುಂಬಿದ್ದು, ಅಂದಿನಿಂದ ಇಂದಿನವರೆಗೂ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿ ಶ್ರೋತೃಗಳ ಮನ ಗೆದ್ದಿದೆ. ಇನ್ನು ಹತ್ತು ವರ್ಷಗಳನ್ನು ದಾಟಿದರೆ ಶತಮಾನದ ಸಂಭ್ರಮದಲ್ಲಿ ಮೈಸೂರು ಆಕಾಶವಾಣಿ ಮಿಂದೇಳುತ್ತದೆ! ‘ಮೈಸೂರು ಆಕಾಶವಾಣಿಗೆ (೯೦) ತೊಂಬತ್ತು: ನೆನಪುಗಳ ಹೊತ್ತು!’ ಕಾರ್ಯಕ್ರಮ ಆಕರ್ಷಕವಾಗಿ ಮೂಡಿ ಬಂತು. ಜೊತೆಗೆ ಸವಿ ಸವಿ ನೆನಪುಗಳನ್ನು ಮೂಡಿಸಿತು. ಮೈಸೂರು ಆಕಾಶವಾಣಿ ಕೇವಲ ಮನರಂಜನೆಯಷ್ಟೇ ಅಲ್ಲದೆ, ಮಾಹಿತಿಯನ್ನೂ ಕೂಡ ನೀಡುತ್ತಾ ಬರುತ್ತಿದೆ. ಈ ನಿಟ್ಟಿನಲ್ಲಿ ಹಿಂದೆ ಪ್ರಸಾರವಾದ ಅನೇಕ ಕಾರ್ಯಕ್ರಮಗಳು, ಜೊತೆಗೆ ನವ ನವೀನ ಕಾರ್ಯಕ್ರಮಗಳು, ಯುವಜನತೆಗೆ, ವೃದ್ಧರಿಗೆ, ಕೃಷಿಕರಿಗೆ, ಮಹಿಳೆಯರಿಗೆ ಉಪಯುಕ್ತವಾದ ಕಾರ್ಯಕ್ರಮಗಳ ಮೂಲಕ ಎಲ್ಲ ವರ್ಗದವರನ್ನೂ ತನ್ನತ್ತ ಸೆಳೆದಿದೆ. ಆಕಾಶವಾಣಿ ನಿರ್ದೇಶಕರಿಗೆ, ಕಾರ್ಯಕ್ರಮ ಅಧಿಕಾರಿಗಳಿಗೆ, ತಂತ್ರಜ್ಞರಿಗೆ, ಕಲಾವಿದರಿಗೆ, ಜೊತೆಗೆ ಕೇಳುಗ ವರ್ಗಕ್ಕೂ ವಿಶೇಷ ಅಭಿನಂದನೆಗಳು.

 -ಕಾಳಿಹುಂಡಿ ಶಿವಕುಮಾರ್, ಮೈಸೂರು

ಆಂದೋಲನ ಡೆಸ್ಕ್

Recent Posts

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

13 mins ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

4 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

4 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

4 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

5 hours ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

5 hours ago