Andolana originals

ಓದುಗರ ಪತ್ರ: ಮಾಹಿತಿಗಳ ಕಣಜ ಮೈಸೂರು ಆಕಾಶವಾಣಿ

ಮೈಸೂರು ಆಕಾಶವಾಣಿಗೆ ೯೦ ವರ್ಷಗಳು ತುಂಬಿದ್ದು, ಅಂದಿನಿಂದ ಇಂದಿನವರೆಗೂ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿ ಶ್ರೋತೃಗಳ ಮನ ಗೆದ್ದಿದೆ. ಇನ್ನು ಹತ್ತು ವರ್ಷಗಳನ್ನು ದಾಟಿದರೆ ಶತಮಾನದ ಸಂಭ್ರಮದಲ್ಲಿ ಮೈಸೂರು ಆಕಾಶವಾಣಿ ಮಿಂದೇಳುತ್ತದೆ! ‘ಮೈಸೂರು ಆಕಾಶವಾಣಿಗೆ (೯೦) ತೊಂಬತ್ತು: ನೆನಪುಗಳ ಹೊತ್ತು!’ ಕಾರ್ಯಕ್ರಮ ಆಕರ್ಷಕವಾಗಿ ಮೂಡಿ ಬಂತು. ಜೊತೆಗೆ ಸವಿ ಸವಿ ನೆನಪುಗಳನ್ನು ಮೂಡಿಸಿತು. ಮೈಸೂರು ಆಕಾಶವಾಣಿ ಕೇವಲ ಮನರಂಜನೆಯಷ್ಟೇ ಅಲ್ಲದೆ, ಮಾಹಿತಿಯನ್ನೂ ಕೂಡ ನೀಡುತ್ತಾ ಬರುತ್ತಿದೆ. ಈ ನಿಟ್ಟಿನಲ್ಲಿ ಹಿಂದೆ ಪ್ರಸಾರವಾದ ಅನೇಕ ಕಾರ್ಯಕ್ರಮಗಳು, ಜೊತೆಗೆ ನವ ನವೀನ ಕಾರ್ಯಕ್ರಮಗಳು, ಯುವಜನತೆಗೆ, ವೃದ್ಧರಿಗೆ, ಕೃಷಿಕರಿಗೆ, ಮಹಿಳೆಯರಿಗೆ ಉಪಯುಕ್ತವಾದ ಕಾರ್ಯಕ್ರಮಗಳ ಮೂಲಕ ಎಲ್ಲ ವರ್ಗದವರನ್ನೂ ತನ್ನತ್ತ ಸೆಳೆದಿದೆ. ಆಕಾಶವಾಣಿ ನಿರ್ದೇಶಕರಿಗೆ, ಕಾರ್ಯಕ್ರಮ ಅಧಿಕಾರಿಗಳಿಗೆ, ತಂತ್ರಜ್ಞರಿಗೆ, ಕಲಾವಿದರಿಗೆ, ಜೊತೆಗೆ ಕೇಳುಗ ವರ್ಗಕ್ಕೂ ವಿಶೇಷ ಅಭಿನಂದನೆಗಳು.

 -ಕಾಳಿಹುಂಡಿ ಶಿವಕುಮಾರ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

24 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

24 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

24 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

24 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

24 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

1 day ago