Andolana originals

ಓದುಗರ ಪತ್ರ: ಮಾಹಿತಿಗಳ ಕಣಜ ಮೈಸೂರು ಆಕಾಶವಾಣಿ

ಮೈಸೂರು ಆಕಾಶವಾಣಿಗೆ ೯೦ ವರ್ಷಗಳು ತುಂಬಿದ್ದು, ಅಂದಿನಿಂದ ಇಂದಿನವರೆಗೂ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿ ಶ್ರೋತೃಗಳ ಮನ ಗೆದ್ದಿದೆ. ಇನ್ನು ಹತ್ತು ವರ್ಷಗಳನ್ನು ದಾಟಿದರೆ ಶತಮಾನದ ಸಂಭ್ರಮದಲ್ಲಿ ಮೈಸೂರು ಆಕಾಶವಾಣಿ ಮಿಂದೇಳುತ್ತದೆ! ‘ಮೈಸೂರು ಆಕಾಶವಾಣಿಗೆ (೯೦) ತೊಂಬತ್ತು: ನೆನಪುಗಳ ಹೊತ್ತು!’ ಕಾರ್ಯಕ್ರಮ ಆಕರ್ಷಕವಾಗಿ ಮೂಡಿ ಬಂತು. ಜೊತೆಗೆ ಸವಿ ಸವಿ ನೆನಪುಗಳನ್ನು ಮೂಡಿಸಿತು. ಮೈಸೂರು ಆಕಾಶವಾಣಿ ಕೇವಲ ಮನರಂಜನೆಯಷ್ಟೇ ಅಲ್ಲದೆ, ಮಾಹಿತಿಯನ್ನೂ ಕೂಡ ನೀಡುತ್ತಾ ಬರುತ್ತಿದೆ. ಈ ನಿಟ್ಟಿನಲ್ಲಿ ಹಿಂದೆ ಪ್ರಸಾರವಾದ ಅನೇಕ ಕಾರ್ಯಕ್ರಮಗಳು, ಜೊತೆಗೆ ನವ ನವೀನ ಕಾರ್ಯಕ್ರಮಗಳು, ಯುವಜನತೆಗೆ, ವೃದ್ಧರಿಗೆ, ಕೃಷಿಕರಿಗೆ, ಮಹಿಳೆಯರಿಗೆ ಉಪಯುಕ್ತವಾದ ಕಾರ್ಯಕ್ರಮಗಳ ಮೂಲಕ ಎಲ್ಲ ವರ್ಗದವರನ್ನೂ ತನ್ನತ್ತ ಸೆಳೆದಿದೆ. ಆಕಾಶವಾಣಿ ನಿರ್ದೇಶಕರಿಗೆ, ಕಾರ್ಯಕ್ರಮ ಅಧಿಕಾರಿಗಳಿಗೆ, ತಂತ್ರಜ್ಞರಿಗೆ, ಕಲಾವಿದರಿಗೆ, ಜೊತೆಗೆ ಕೇಳುಗ ವರ್ಗಕ್ಕೂ ವಿಶೇಷ ಅಭಿನಂದನೆಗಳು.

 -ಕಾಳಿಹುಂಡಿ ಶಿವಕುಮಾರ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

2 mins ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

14 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

32 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

38 mins ago

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 day ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 day ago