Andolana originals

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ) ಮೈಸೂರಿನ ಸ್ಥಳೀಯ ಕೈಗಾರಿಕೋದ್ಯಮದ ಹೆಗ್ಗುರುತಾಗಿದೆ. ಈ ಉತ್ಪನ್ನವು ರಾಜ್ಯದಲ್ಲೇ ಅಲ್ಲ ಹೊರ ರಾಜ್ಯಗಳಲ್ಲೂ ಮನೆ ಮಾತಾಗಿದೆ.

ಬಿ.ವಿ.ಪಂಡಿತರು ನಂಜನಗೂಡಿನಲ್ಲಿ ಸ್ಥಾಪಿಸಿದ ಸದ್ವೈದ್ಯ ಶಾಲಾ ನೂರು ವರ್ಷಗಳನ್ನು ಪೂರೈಸಿದ್ದು, ನೂರಾರು ಮಂದಿಗೆ ಉದ್ಯೋಗ ನೀಡುವ ಮೂಲಕ ಅವರ ಜೀವನ ಭದ್ರತೆಗೂ ಸಹಾಯವಾಗಿದೆ. ಆದರೆ ಆಯುರ್ವೇದ ಔಷಧಗಳ ಮೂಲಕ ಸಮಾಜಸೇವೆ ಮಾಡಿದ್ದ ಬಿ.ವಿ.ಪಂಡಿತರ ಹೆಸರನ್ನು ನಂಜನಗೂಡು ಪಟ್ಟಣದ ಯಾವುದಾದರೊಂದು ವೃತ್ತ ಅಥವಾ ರಸ್ತೆಗಳಿಗೆ ಇಡದಿರುವುದು ಬೇಸರದ ಸಂಗತಿಯಾಗಿದೆ. ಜನಪ್ರತಿನಿಧಿಗಳು ಹಾಗೂ ಪುರಸಭೆಯವರು ನಂಜನಗೂಡು ಪಟ್ಟಣದ ಪ್ರಮುಖ ವೃತ್ತ ಅಥವಾ ರಸ್ತೆಯೊಂದಕ್ಕೆ ಬಿ.ವಿ.ಪಂಡಿತರ ಹೆಸರಿಡಲು ಕ್ರಮ ಕೈಗೊಳ್ಳಬೇಕಾಗಿದೆ.

 -ಅನಿಲ್ ಕುಮಾರ್, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

2 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

2 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

2 hours ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

2 hours ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

2 hours ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

2 hours ago