Andolana originals

ಓದುಗರ ಪತ್ರ: ಮೆಟ್ರೋಗೆ ಶಂಕರ್ ನಾಗ್ ಹೆಸರಿಡಿ

ರಾಜ್ಯ ಸರ್ಕಾರ ನಮ್ಮ ಮೆಟ್ರೋಗೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರು ಇಡಲು ನಿರ್ಧರಿಸಿರುವುದು ಶ್ಲಾಘನೀಯ. ಆದರೆ ತಮ್ಮ ಸ್ವಂತ ಖರ್ಚಿನಲ್ಲಿ ಬೆಂಗಳೂರಿನ ಮೆಟ್ರೋದ ಸರ್ವೆ ಮಾಡಿ ೧೯೮೬-೮೭ರಲ್ಲಿ ಈ ಮಹತ್ತರ ಯೋಜನೆಯ ಬಗ್ಗೆ ಪ್ರಸ್ತಾವನೆ ಮಾಡಿದ ನಟ ಶಂಕರ್ ನಾಗ್ ಅವರ ಹೆಸರನ್ನು ಒಂದು ಮೆಟ್ರೋ ನಿಲ್ದಾಣಕ್ಕಾದರೂ ಇಡ ಬೇಕೆಂಬುದು ಬಹು ದಿನಗಳ ಬೇಡಿಕೆ.

ಅವರ ಹೆಸರಿನಲ್ಲಿ ನಿಲ್ದಾಣಕ್ಕೆ ಹೆಸರು ಇಡುವುದರಿಂದ ನಾಡಿನ ಪ್ರತಿಭಾವಂತ ನಟನಿಗೆ ಗೌರವ ಸಲ್ಲಿಸಿ ದಂತಾಗುತ್ತದೆ. ಜನರು ರಾಜ್ಯ ಸರ್ಕಾರಕ್ಕೆ ಈ ಕುರಿತು ಮನವಿ ಮಾಡಿ ಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮೆಟ್ರೋ ಆಗಬೇಕೆಂಬುದೂ ಕೂಡ ಶಂಕರ್ ನಾಗ್ ಅವರ ಕನಸಾಗಿತ್ತು. ಅದು ಇದೀಗ ನನಸಾಗಿದ್ದು, ರಾಜ್ಯ ಸರ್ಕಾರ ಈ ವಿಷಯವಾಗಿ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿ ನಾಡಿನ ಹಲವು ಜನರಿದ್ದಾರೆ.

-ಚೇತನ್ ಸಜ್ಜನ, ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು

ಆಂದೋಲನ ಡೆಸ್ಕ್

Recent Posts

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

15 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

4 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

4 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

4 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

4 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

4 hours ago