ಓದುಗರ ಪತ್ರ
ರಾಜ್ಯ ಸರ್ಕಾರ ನಮ್ಮ ಮೆಟ್ರೋಗೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರು ಇಡಲು ನಿರ್ಧರಿಸಿರುವುದು ಶ್ಲಾಘನೀಯ. ಆದರೆ ತಮ್ಮ ಸ್ವಂತ ಖರ್ಚಿನಲ್ಲಿ ಬೆಂಗಳೂರಿನ ಮೆಟ್ರೋದ ಸರ್ವೆ ಮಾಡಿ ೧೯೮೬-೮೭ರಲ್ಲಿ ಈ ಮಹತ್ತರ ಯೋಜನೆಯ ಬಗ್ಗೆ ಪ್ರಸ್ತಾವನೆ ಮಾಡಿದ ನಟ ಶಂಕರ್ ನಾಗ್ ಅವರ ಹೆಸರನ್ನು ಒಂದು ಮೆಟ್ರೋ ನಿಲ್ದಾಣಕ್ಕಾದರೂ ಇಡ ಬೇಕೆಂಬುದು ಬಹು ದಿನಗಳ ಬೇಡಿಕೆ.
ಅವರ ಹೆಸರಿನಲ್ಲಿ ನಿಲ್ದಾಣಕ್ಕೆ ಹೆಸರು ಇಡುವುದರಿಂದ ನಾಡಿನ ಪ್ರತಿಭಾವಂತ ನಟನಿಗೆ ಗೌರವ ಸಲ್ಲಿಸಿ ದಂತಾಗುತ್ತದೆ. ಜನರು ರಾಜ್ಯ ಸರ್ಕಾರಕ್ಕೆ ಈ ಕುರಿತು ಮನವಿ ಮಾಡಿ ಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮೆಟ್ರೋ ಆಗಬೇಕೆಂಬುದೂ ಕೂಡ ಶಂಕರ್ ನಾಗ್ ಅವರ ಕನಸಾಗಿತ್ತು. ಅದು ಇದೀಗ ನನಸಾಗಿದ್ದು, ರಾಜ್ಯ ಸರ್ಕಾರ ಈ ವಿಷಯವಾಗಿ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿ ನಾಡಿನ ಹಲವು ಜನರಿದ್ದಾರೆ.
-ಚೇತನ್ ಸಜ್ಜನ, ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…