ಓದುಗರ ಪತ್ರ
ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿಯ ಸಂತೇಶಿವರ ಏತ ನೀರಾವರಿ ಯೋಜನೆಯ ರೂವಾರಿಯಾದ, ಸಾಹಿತಿ ದಿ.ಎಸ್.ಎಲ್. ಭೈರಪ್ಪ ಅವರ ಹೆಸರನ್ನು ಯೋಜನೆಗೆ ಇಡುವಂತೆ ಕಾವೇರಿ ನೀರಾವರಿ ನಿಗಮಕ್ಕೆ ಮನವಿ ಮಾಡಿರುವ ಶಾಸಕ ಸಿ.ಎನ್. ಬಾಲಕೃಷ್ಣ ಅವರ ನಡೆ ಶ್ಲಾಘನೀಯ.
ಭೈರಪ್ಪರವರು ಹುಟ್ಟೂರಿಗೆ ಏನಾದರೂ ಮಾಡಬೇಕೆಂಬ ಇಚ್ಛೆಯಿಂದ, ರೈತರಿಗೆ ಶಾಶ್ವತವಾದ ನೀರಾವರಿ ಯೋಜನೆ ರೂಪಿಸಲು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ೨೫ ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸುವ ಮೂಲಕ ಅನುದಾನ ತಂದಿದ್ದರಿಂದ, ಇಂದು ಸಂತೇಶಿವರ ಗ್ರಾಮದ ದೊಡ್ಡಕೆರೆ ಹಾಗೂ ಬೆಳಗುಲಿ ಗ್ರಾಮದ ಕೆರೆ ತುಂಬಿತುಳುಕಿದ್ದು,
ಭೈರಪ್ಪನವರ ಕನಸು ನನಸಾಗಿದೆ. ಸಂತೇಶಿವರದಲ್ಲಿ ಭೈರಪ್ಪ ಅವರ ಹೆಸರಿನಲ್ಲಿ ಸಂಸ್ಕೃತಿ ಭವನ ನಿರ್ಮಾಣ ಮಾಡಲು ಸಿಎಂ ಸಿದ್ದರಾಮಯ್ಯ ಅವರು ೫ ಕೋಟಿ ರೂ. ಅನುದಾನ ಘೋಷಿಸಿದ್ದು, ಆದಷ್ಟು ಬೇಗ ಬಿಡುಗಡೆ ಮಾಡುವುದು ಅಗತ್ಯ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…