ಓದುಗರ ಪತ್ರ
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು ನಂಜನಗೂಡಿನಲ್ಲಿ. ಆದರೆ ಹೌಸಿಂಗ್ ಬೋರ್ಡ್ ಕಾಲೋನಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ಕಾಯಕಲ್ಪ ಬೇಕಾಗಿದೆ. ವಾರ್ಡ್ ನಂಬರ್ ೨೧, ೨೨ ಹಾಗೂ ೨೩ ಹಾಗೂ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣೆ ಎದುರುಗಡೆಯ ಮುಖ್ಯ ರಸ್ತೆ ತೀರಾ ಹಾಳಾಗಿದ್ದು, ಬೈಕ್ನಲ್ಲಿ ಹೋಗುವಾಗ ಕೆಲವರು ಬಿದ್ದು ಗಾಯ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ರಸ್ತೆ ದುರಸ್ತಿ ಮಾಡುವಂತೆ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ, ಶಾಸಕ ದರ್ಶನ ಧ್ರುವ ನಾರಾಯಣ ವಾಸ್ತವತೆಯನ್ನು ಅರಿತು ಈ ಮುಖ್ಯ ರಸ್ತೆ ಸರಿಪಡಿಸಲು ಅಗತ್ಯವಾಗಿ ಮುಂದಾಗಬೇಕಿದೆ.
– ಅನಿಲ್ ಕುಮಾರ್, ನಂಜನಗೂಡು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…