Andolana originals

ಓದುಗರ ಪತ್ರ: ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ನ್ನು ಪ್ರಧಾನಿ ರದ್ದುಪಡಿಸಲಿ

ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕೇಂದ್ರ ಸರ್ಕಾರ ಈ ಪ್ರಕರಣದಲ್ಲಿ ತನ್ನ ಪಾತ್ರದ ಅಗತ್ಯವಿಲ್ಲ ಎಂಬಂತೆ ವರ್ತಿಸುತ್ತಿರುವುದು ಸರಿ ಅನಿಸುತ್ತಿಲ್ಲ.

ಪ್ರಜ್ವಲ್ ಅವರನ್ನು ದೇಶಕ್ಕೆ ವಾಪಸ್ ಕರೆಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಕಾರ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದು ಸರಿಯಷ್ಟೆ. ಪ್ರಜ್ವಲ್
ಅವರಿಗೆ ಕೇಂದ್ರವು ನೀಡಿರುವ ರಾಜತಾಂತ್ರಿಕ (ಡಿಪ್ಲೊಮ್ಯಾಟಿಕ್) ಪಾಸ್ ಪೋರ್ಟ್‌ ಅನ್ನು ರದ್ದುಪಡಿಸಿದರೆ, ಆತ ಭಾರತಕ್ಕೆ ಮರಳುವುದು ಅನಿವಾರ್ಯವಾಗುತ್ತದೆ.

ಆದರೆ, ಪ್ರಧಾನಿ ಮೋದಿ ಅವರು ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳದೆ, ಪ್ರಜ್ವಲ್ ಪ್ರಕರಣ ಕೇವಲ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ್ದು ಎಂಬಂತೆ ವರ್ತಿಸುತ್ತಿರುವುದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ.
ನರೇಂದ್ರ ಮೋದಿ ಅವರಿಗೆ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವ ಬದಲು ಮೃಗೀಯ ವ್ಯಕ್ತಿತ್ವದ ಪ್ರಜ್ವಲ್ ಅವರನ್ನು ರಕ್ಷಿಸಿ, ಬಿಜೆಪಿ- ಜಾತ್ಯತೀತ ಜನತಾದಳದ ಮೈತ್ರಿಯನ್ನು ಉಳಿಸಿಕೊಳ್ಳುವುದೇ ಮುಖ್ಯವಾದಂತಿದೆ.

‘ಬೇಟಿ ಬಚಾವೋ… ಬೇಟಿ ಪಡಾವೋ’, ಮಹಿಳಾ ಸಬಲೀಕರಣ… ಇತ್ಯಾದಿ ಸ್ತ್ರೀಯರ ರಕ್ಷಣೆ, ಪಾಲನೆ, ಪೋಷಣೆ ಬಗ್ಗೆ ವರ್ಣರಂಜಿತ ಮಾತುಗಳನ್ನಾಡುತ್ತಿರುವ ಕೇಂದ್ರ ಸರ್ಕಾರದ ನಾಯಕರು, ಪ್ರಜ್ವಲ್ ಪ್ರಕರಣದಲ್ಲಿ ಅತ್ಯಂತ ನಿರ್ಲಕ್ಷ್ಯ ತೋರಿಸುತ್ತಿರುವುದು ನಾಚಿಕೆಗೇಡು, ಸುಖಾಸುಮ್ಮನೆ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಪ್ರಜ್ವಲ್‌ನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಮೋದಿ ಅವರು ಮುಂದಾಗಬೇಕು. ಆ ಮೂಲಕ ಆರೋಪಿಯ ಬಂಧನಕ್ಕೆ ಇರುವ ತೊಡಕನ್ನು ನಿವಾರಿಸಬೇಕು.

-ಆರ್.ವಿ.ಮಂಜುಪ್ರಸಾದ್, ಸರಸ್ವತಿಪುರಂ, ಮೈಸೂರು.

andolana

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

6 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

6 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

6 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

6 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

6 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

6 hours ago