ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕೇಂದ್ರ ಸರ್ಕಾರ ಈ ಪ್ರಕರಣದಲ್ಲಿ ತನ್ನ ಪಾತ್ರದ ಅಗತ್ಯವಿಲ್ಲ ಎಂಬಂತೆ ವರ್ತಿಸುತ್ತಿರುವುದು ಸರಿ ಅನಿಸುತ್ತಿಲ್ಲ.
ಪ್ರಜ್ವಲ್ ಅವರನ್ನು ದೇಶಕ್ಕೆ ವಾಪಸ್ ಕರೆಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಕಾರ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದು ಸರಿಯಷ್ಟೆ. ಪ್ರಜ್ವಲ್
ಅವರಿಗೆ ಕೇಂದ್ರವು ನೀಡಿರುವ ರಾಜತಾಂತ್ರಿಕ (ಡಿಪ್ಲೊಮ್ಯಾಟಿಕ್) ಪಾಸ್ ಪೋರ್ಟ್ ಅನ್ನು ರದ್ದುಪಡಿಸಿದರೆ, ಆತ ಭಾರತಕ್ಕೆ ಮರಳುವುದು ಅನಿವಾರ್ಯವಾಗುತ್ತದೆ.
ಆದರೆ, ಪ್ರಧಾನಿ ಮೋದಿ ಅವರು ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳದೆ, ಪ್ರಜ್ವಲ್ ಪ್ರಕರಣ ಕೇವಲ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ್ದು ಎಂಬಂತೆ ವರ್ತಿಸುತ್ತಿರುವುದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ.
ನರೇಂದ್ರ ಮೋದಿ ಅವರಿಗೆ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವ ಬದಲು ಮೃಗೀಯ ವ್ಯಕ್ತಿತ್ವದ ಪ್ರಜ್ವಲ್ ಅವರನ್ನು ರಕ್ಷಿಸಿ, ಬಿಜೆಪಿ- ಜಾತ್ಯತೀತ ಜನತಾದಳದ ಮೈತ್ರಿಯನ್ನು ಉಳಿಸಿಕೊಳ್ಳುವುದೇ ಮುಖ್ಯವಾದಂತಿದೆ.
‘ಬೇಟಿ ಬಚಾವೋ… ಬೇಟಿ ಪಡಾವೋ’, ಮಹಿಳಾ ಸಬಲೀಕರಣ… ಇತ್ಯಾದಿ ಸ್ತ್ರೀಯರ ರಕ್ಷಣೆ, ಪಾಲನೆ, ಪೋಷಣೆ ಬಗ್ಗೆ ವರ್ಣರಂಜಿತ ಮಾತುಗಳನ್ನಾಡುತ್ತಿರುವ ಕೇಂದ್ರ ಸರ್ಕಾರದ ನಾಯಕರು, ಪ್ರಜ್ವಲ್ ಪ್ರಕರಣದಲ್ಲಿ ಅತ್ಯಂತ ನಿರ್ಲಕ್ಷ್ಯ ತೋರಿಸುತ್ತಿರುವುದು ನಾಚಿಕೆಗೇಡು, ಸುಖಾಸುಮ್ಮನೆ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಪ್ರಜ್ವಲ್ನ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸಲು ಮೋದಿ ಅವರು ಮುಂದಾಗಬೇಕು. ಆ ಮೂಲಕ ಆರೋಪಿಯ ಬಂಧನಕ್ಕೆ ಇರುವ ತೊಡಕನ್ನು ನಿವಾರಿಸಬೇಕು.
-ಆರ್.ವಿ.ಮಂಜುಪ್ರಸಾದ್, ಸರಸ್ವತಿಪುರಂ, ಮೈಸೂರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…