ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕೇಂದ್ರ ಸರ್ಕಾರ ಈ ಪ್ರಕರಣದಲ್ಲಿ ತನ್ನ ಪಾತ್ರದ ಅಗತ್ಯವಿಲ್ಲ ಎಂಬಂತೆ ವರ್ತಿಸುತ್ತಿರುವುದು ಸರಿ ಅನಿಸುತ್ತಿಲ್ಲ.
ಪ್ರಜ್ವಲ್ ಅವರನ್ನು ದೇಶಕ್ಕೆ ವಾಪಸ್ ಕರೆಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಕಾರ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದು ಸರಿಯಷ್ಟೆ. ಪ್ರಜ್ವಲ್
ಅವರಿಗೆ ಕೇಂದ್ರವು ನೀಡಿರುವ ರಾಜತಾಂತ್ರಿಕ (ಡಿಪ್ಲೊಮ್ಯಾಟಿಕ್) ಪಾಸ್ ಪೋರ್ಟ್ ಅನ್ನು ರದ್ದುಪಡಿಸಿದರೆ, ಆತ ಭಾರತಕ್ಕೆ ಮರಳುವುದು ಅನಿವಾರ್ಯವಾಗುತ್ತದೆ.
ಆದರೆ, ಪ್ರಧಾನಿ ಮೋದಿ ಅವರು ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳದೆ, ಪ್ರಜ್ವಲ್ ಪ್ರಕರಣ ಕೇವಲ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ್ದು ಎಂಬಂತೆ ವರ್ತಿಸುತ್ತಿರುವುದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ.
ನರೇಂದ್ರ ಮೋದಿ ಅವರಿಗೆ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವ ಬದಲು ಮೃಗೀಯ ವ್ಯಕ್ತಿತ್ವದ ಪ್ರಜ್ವಲ್ ಅವರನ್ನು ರಕ್ಷಿಸಿ, ಬಿಜೆಪಿ- ಜಾತ್ಯತೀತ ಜನತಾದಳದ ಮೈತ್ರಿಯನ್ನು ಉಳಿಸಿಕೊಳ್ಳುವುದೇ ಮುಖ್ಯವಾದಂತಿದೆ.
‘ಬೇಟಿ ಬಚಾವೋ… ಬೇಟಿ ಪಡಾವೋ’, ಮಹಿಳಾ ಸಬಲೀಕರಣ… ಇತ್ಯಾದಿ ಸ್ತ್ರೀಯರ ರಕ್ಷಣೆ, ಪಾಲನೆ, ಪೋಷಣೆ ಬಗ್ಗೆ ವರ್ಣರಂಜಿತ ಮಾತುಗಳನ್ನಾಡುತ್ತಿರುವ ಕೇಂದ್ರ ಸರ್ಕಾರದ ನಾಯಕರು, ಪ್ರಜ್ವಲ್ ಪ್ರಕರಣದಲ್ಲಿ ಅತ್ಯಂತ ನಿರ್ಲಕ್ಷ್ಯ ತೋರಿಸುತ್ತಿರುವುದು ನಾಚಿಕೆಗೇಡು, ಸುಖಾಸುಮ್ಮನೆ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಪ್ರಜ್ವಲ್ನ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸಲು ಮೋದಿ ಅವರು ಮುಂದಾಗಬೇಕು. ಆ ಮೂಲಕ ಆರೋಪಿಯ ಬಂಧನಕ್ಕೆ ಇರುವ ತೊಡಕನ್ನು ನಿವಾರಿಸಬೇಕು.
-ಆರ್.ವಿ.ಮಂಜುಪ್ರಸಾದ್, ಸರಸ್ವತಿಪುರಂ, ಮೈಸೂರು.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…