Andolana originals

ಓದುಗರ ಪತ್ರ:  ಆನ್‌ಲೈನ್ ಅಶ್ಲೀಲತೆ ನಿಯಂತ್ರಣಕೆ ರಾಷ್ಟ್ರೀಯ ನೀತಿ ಅಗತ್ಯ

ಇತ್ತೀಚೆಗೆ ಅಶ್ಲೀಲ ವೆಬ್‌ಸೈಟ್‌ಗಳ ಮೇಲೆ ನಿಷೇಧ ಹೇರಬೇಕೆಂಬ ಮನವಿಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಅಭಿಪ್ರಾಯವು, ಆನ್‌ಲೈನ್ ಅಶ್ಲೀಲತೆ ನಿಯಂತ್ರಣದ ಅಗತ್ಯವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ. ಅಪ್ರಾಪ್ತರು ಇದಕ್ಕೆ ಒಳಗಾಗುವ ಅಪಾಯ ಅತ್ಯಂತ ಗಂಭೀರ ವಿಷಯವಾಗಿದ್ದು, ಅದನ್ನು ನಿರ್ಲಕ್ಷಿಸಲಾಗದು. ಕೇಂದ್ರ ಸರ್ಕಾರವು ಡಿಜಿಟಲ್ ಸುರಕ್ಷತೆ ಮತ್ತು ಜಾಗೃತಿ ನೀತಿ ರೂಪಿಸಬೇಕಾಗಿದ್ದು, ಅದರಲ್ಲಿ ತಾಂತ್ರಿಕ ನಿಯಂತ್ರಣ, ಡಿಜಿಟಲ್ ಸಾಕ್ಷರತೆ ಮತ್ತು ಪೋಷಕರ ಸಬಲಿಕರಣ ಮುಖ್ಯ ಅಂಶಗಳಾಗಿರಬೇಕು.

ಅಪ್ರಾಪ್ತರು ಬಳಸುವ ಡಿಜಿಟಲ್ ಸಾಧನಗಳಲ್ಲಿ ಕಡ್ಡಾಯವಾಗಿ ವಿಷಯ ಶೋಧಕ ವ್ಯವಸ್ಥೆ ಇರಬೇಕು. ಜೊತೆಗೆ, ವಯಸ್ಸು ದೃಢೀಕರಿಸುವ ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆ ಹಾಗೂ ಇಂಟರ್ನೆಟ್ ಸೇವಾದಾತರ ಸಹಯೋಗದ ಮೂಲಕ ಅಶ್ಲೀಲ ವಿಷಯಗಳ ಪ್ರವೇಶವನ್ನು ತಡೆಹಿಡಿಯ ಬೇಕು. ಅದರ ಜೊತೆಗೆ, ಶಾಲಾ ಪಠ್ಯಕ್ರಮದಲ್ಲೇ ಡಿಜಿಟಲ್ ಶಿಕ್ಷಣವನ್ನು ಅಳವಡಿಸಿ ಮಕ್ಕಳಲ್ಲಿ ಆರೋಗ್ಯಕರ ಮಾಹಿತಿ ಮತ್ತು ಹಾನಿಕಾರಕ ವಿಷಯಗಳ ನಡುವಿನ ವ್ಯತ್ಯಾಸಗಳ ಕುರಿತು ಅರಿವು ಮೂಡಿಸುವುದು ಅವಶ್ಯ.

 – ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

4 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

18 mins ago

ಪ್ರವಾಸಿಗರ ಆಕರ್ಷಣೆಯ ಭದ್ರದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

50 mins ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

1 hour ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

5 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

5 hours ago