Andolana originals

ಓದುಗರ ಪತ್ರ:  ಆನ್‌ಲೈನ್ ಅಶ್ಲೀಲತೆ ನಿಯಂತ್ರಣಕೆ ರಾಷ್ಟ್ರೀಯ ನೀತಿ ಅಗತ್ಯ

ಇತ್ತೀಚೆಗೆ ಅಶ್ಲೀಲ ವೆಬ್‌ಸೈಟ್‌ಗಳ ಮೇಲೆ ನಿಷೇಧ ಹೇರಬೇಕೆಂಬ ಮನವಿಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಅಭಿಪ್ರಾಯವು, ಆನ್‌ಲೈನ್ ಅಶ್ಲೀಲತೆ ನಿಯಂತ್ರಣದ ಅಗತ್ಯವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ. ಅಪ್ರಾಪ್ತರು ಇದಕ್ಕೆ ಒಳಗಾಗುವ ಅಪಾಯ ಅತ್ಯಂತ ಗಂಭೀರ ವಿಷಯವಾಗಿದ್ದು, ಅದನ್ನು ನಿರ್ಲಕ್ಷಿಸಲಾಗದು. ಕೇಂದ್ರ ಸರ್ಕಾರವು ಡಿಜಿಟಲ್ ಸುರಕ್ಷತೆ ಮತ್ತು ಜಾಗೃತಿ ನೀತಿ ರೂಪಿಸಬೇಕಾಗಿದ್ದು, ಅದರಲ್ಲಿ ತಾಂತ್ರಿಕ ನಿಯಂತ್ರಣ, ಡಿಜಿಟಲ್ ಸಾಕ್ಷರತೆ ಮತ್ತು ಪೋಷಕರ ಸಬಲಿಕರಣ ಮುಖ್ಯ ಅಂಶಗಳಾಗಿರಬೇಕು.

ಅಪ್ರಾಪ್ತರು ಬಳಸುವ ಡಿಜಿಟಲ್ ಸಾಧನಗಳಲ್ಲಿ ಕಡ್ಡಾಯವಾಗಿ ವಿಷಯ ಶೋಧಕ ವ್ಯವಸ್ಥೆ ಇರಬೇಕು. ಜೊತೆಗೆ, ವಯಸ್ಸು ದೃಢೀಕರಿಸುವ ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆ ಹಾಗೂ ಇಂಟರ್ನೆಟ್ ಸೇವಾದಾತರ ಸಹಯೋಗದ ಮೂಲಕ ಅಶ್ಲೀಲ ವಿಷಯಗಳ ಪ್ರವೇಶವನ್ನು ತಡೆಹಿಡಿಯ ಬೇಕು. ಅದರ ಜೊತೆಗೆ, ಶಾಲಾ ಪಠ್ಯಕ್ರಮದಲ್ಲೇ ಡಿಜಿಟಲ್ ಶಿಕ್ಷಣವನ್ನು ಅಳವಡಿಸಿ ಮಕ್ಕಳಲ್ಲಿ ಆರೋಗ್ಯಕರ ಮಾಹಿತಿ ಮತ್ತು ಹಾನಿಕಾರಕ ವಿಷಯಗಳ ನಡುವಿನ ವ್ಯತ್ಯಾಸಗಳ ಕುರಿತು ಅರಿವು ಮೂಡಿಸುವುದು ಅವಶ್ಯ.

 – ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

19 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

19 hours ago