ಓದುಗರ ಪತ್ರ
ಇತ್ತೀಚೆಗೆ ಅಶ್ಲೀಲ ವೆಬ್ಸೈಟ್ಗಳ ಮೇಲೆ ನಿಷೇಧ ಹೇರಬೇಕೆಂಬ ಮನವಿಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಅಭಿಪ್ರಾಯವು, ಆನ್ಲೈನ್ ಅಶ್ಲೀಲತೆ ನಿಯಂತ್ರಣದ ಅಗತ್ಯವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ. ಅಪ್ರಾಪ್ತರು ಇದಕ್ಕೆ ಒಳಗಾಗುವ ಅಪಾಯ ಅತ್ಯಂತ ಗಂಭೀರ ವಿಷಯವಾಗಿದ್ದು, ಅದನ್ನು ನಿರ್ಲಕ್ಷಿಸಲಾಗದು. ಕೇಂದ್ರ ಸರ್ಕಾರವು ಡಿಜಿಟಲ್ ಸುರಕ್ಷತೆ ಮತ್ತು ಜಾಗೃತಿ ನೀತಿ ರೂಪಿಸಬೇಕಾಗಿದ್ದು, ಅದರಲ್ಲಿ ತಾಂತ್ರಿಕ ನಿಯಂತ್ರಣ, ಡಿಜಿಟಲ್ ಸಾಕ್ಷರತೆ ಮತ್ತು ಪೋಷಕರ ಸಬಲಿಕರಣ ಮುಖ್ಯ ಅಂಶಗಳಾಗಿರಬೇಕು.
ಅಪ್ರಾಪ್ತರು ಬಳಸುವ ಡಿಜಿಟಲ್ ಸಾಧನಗಳಲ್ಲಿ ಕಡ್ಡಾಯವಾಗಿ ವಿಷಯ ಶೋಧಕ ವ್ಯವಸ್ಥೆ ಇರಬೇಕು. ಜೊತೆಗೆ, ವಯಸ್ಸು ದೃಢೀಕರಿಸುವ ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆ ಹಾಗೂ ಇಂಟರ್ನೆಟ್ ಸೇವಾದಾತರ ಸಹಯೋಗದ ಮೂಲಕ ಅಶ್ಲೀಲ ವಿಷಯಗಳ ಪ್ರವೇಶವನ್ನು ತಡೆಹಿಡಿಯ ಬೇಕು. ಅದರ ಜೊತೆಗೆ, ಶಾಲಾ ಪಠ್ಯಕ್ರಮದಲ್ಲೇ ಡಿಜಿಟಲ್ ಶಿಕ್ಷಣವನ್ನು ಅಳವಡಿಸಿ ಮಕ್ಕಳಲ್ಲಿ ಆರೋಗ್ಯಕರ ಮಾಹಿತಿ ಮತ್ತು ಹಾನಿಕಾರಕ ವಿಷಯಗಳ ನಡುವಿನ ವ್ಯತ್ಯಾಸಗಳ ಕುರಿತು ಅರಿವು ಮೂಡಿಸುವುದು ಅವಶ್ಯ.
– ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…
ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…
ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ ಚಾಮರಾಜನಗರ: ಇಲ್ಲಿನ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…