Andolana originals

ಓದುಗರ ಪತ್ರ: ಚಾ.ಬೆಟ್ಟದಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಾಲಯಕ್ಕೆ ಬರುವ ಭಕ್ತರಿಗೆ ತಮ್ಮ ಪಾದರಕ್ಷೆಗಳನ್ನು ಚಪ್ಪಲಿ ಸ್ಟಾಂಡಿನಲ್ಲಿಯೇ ಬಿಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಯಾವುದೇ ಅಂಗಡಿ ಮುಂಗಟ್ಟುಗಳ
ಮುಂದೆ ಬಿಡಬಾರದು ಎಂದು ಸೂಚಿಸಲಾಗಿದೆ. ದೇವಾಲಯದ ಆವರಣದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಇದೊಂದು ಸ್ವಾಗತಾರ್ಹ ಕ್ರಮ. ಆದರೆ ನಾವು ಚಪ್ಪಲಿಗಳನ್ನು ಈ ಸ್ಟಾಂಡಿನಲ್ಲಿ ಬಿಡಬೇಕಾದರೆ ಅವುಗಳನ್ನು ಕೈಯಲ್ಲಿ ಎತ್ತಿ ಇಡಬೇಕು. ಆದರೆ ಇಲ್ಲಿ ಚಪ್ಪಲಿ ಮುಟ್ಟಿದ ಕೈಗಳನ್ನು ತೊಳೆದುಕೊಳ್ಳಲು ನೀರಿನ ವ್ಯವಸ್ಥೆಯೇ ಇಲ್ಲ. ಇನ್ನು ದೇವಾಲಯದ ಟಿಕೆಟ್ ಕೌಂಟರ್ ಬಳಿ ಇರುವ ನೀರಿನ ಘಟಕದಲ್ಲಿಯೂ ನೀರಿನ ಸೌಲಭ್ಯವಿಲ್ಲದೆ ಭಕ್ತರು ಕೈಗಳನ್ನು ತೊಳೆದುಕೊಳ್ಳಲು ಪರದಾಡುವಂತಾಗಿದೆ. ಚಪ್ಪಲಿ ಸ್ಟ್ಯಾಂಡಿನವರ ಬಳಿ ನೀರಿನ ವ್ಯವಸ್ಥೆಯ ಬಗ್ಗೆ ಕೇಳಿದರೆ ಅವರು ದೇವಾಲಯದ ಆಡಳಿತ ಮಂಡಳಿಯವರನ್ನು ಕೇಳಿ ಎನ್ನುತ್ತಾರೆ. ಇನ್ನು ಈ ಬಗ್ಗೆ ದೂರು ನೀಡಲು ದೇವಾಲಯದ ಸಹಾಯವಾಣಿಗೆ ಕರೆ ಮಾಡಿದರೂ ಯಾರೂ ಕರೆ ಸ್ವೀಕರಿಸುವುದಿಲ್ಲ. ಇದರಿಂದಾಗಿ ಭಕ್ತರಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟವರು ಚಪ್ಪಲಿ ಸ್ಟ್ಯಾಂಡಿನ ಬಳಿ ಕೈ-ಕಾಲುಗಳನ್ನು ತೊಳೆದುಕೊಳ್ಳಲು ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ.

-ಶಿವಮೊಗ್ಗ ನಾ.ದಿನೇಶ್ ಅಡಿಗ, ಮೈಸೂರು.

andolana

Recent Posts

ಎಸ್‌ಸಿ,ಎಸ್‌ಟಿಗೆ ಮೀಸಲಿಟ್ಟ 50ಸಾವಿರ ಕೋಟಿ ದುರಪಯೋಗ : ತಮ್ಮದೇ ಸರ್ಕಾರದ ವಿರುದ್ಧ ಆರೋಪ

ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…

1 min ago

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

1 hour ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

2 hours ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

2 hours ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

3 hours ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

3 hours ago