Andolana originals

ಓದುಗರ ಪತ್ರ: ಚಾ.ಬೆಟ್ಟದಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಾಲಯಕ್ಕೆ ಬರುವ ಭಕ್ತರಿಗೆ ತಮ್ಮ ಪಾದರಕ್ಷೆಗಳನ್ನು ಚಪ್ಪಲಿ ಸ್ಟಾಂಡಿನಲ್ಲಿಯೇ ಬಿಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಯಾವುದೇ ಅಂಗಡಿ ಮುಂಗಟ್ಟುಗಳ
ಮುಂದೆ ಬಿಡಬಾರದು ಎಂದು ಸೂಚಿಸಲಾಗಿದೆ. ದೇವಾಲಯದ ಆವರಣದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಇದೊಂದು ಸ್ವಾಗತಾರ್ಹ ಕ್ರಮ. ಆದರೆ ನಾವು ಚಪ್ಪಲಿಗಳನ್ನು ಈ ಸ್ಟಾಂಡಿನಲ್ಲಿ ಬಿಡಬೇಕಾದರೆ ಅವುಗಳನ್ನು ಕೈಯಲ್ಲಿ ಎತ್ತಿ ಇಡಬೇಕು. ಆದರೆ ಇಲ್ಲಿ ಚಪ್ಪಲಿ ಮುಟ್ಟಿದ ಕೈಗಳನ್ನು ತೊಳೆದುಕೊಳ್ಳಲು ನೀರಿನ ವ್ಯವಸ್ಥೆಯೇ ಇಲ್ಲ. ಇನ್ನು ದೇವಾಲಯದ ಟಿಕೆಟ್ ಕೌಂಟರ್ ಬಳಿ ಇರುವ ನೀರಿನ ಘಟಕದಲ್ಲಿಯೂ ನೀರಿನ ಸೌಲಭ್ಯವಿಲ್ಲದೆ ಭಕ್ತರು ಕೈಗಳನ್ನು ತೊಳೆದುಕೊಳ್ಳಲು ಪರದಾಡುವಂತಾಗಿದೆ. ಚಪ್ಪಲಿ ಸ್ಟ್ಯಾಂಡಿನವರ ಬಳಿ ನೀರಿನ ವ್ಯವಸ್ಥೆಯ ಬಗ್ಗೆ ಕೇಳಿದರೆ ಅವರು ದೇವಾಲಯದ ಆಡಳಿತ ಮಂಡಳಿಯವರನ್ನು ಕೇಳಿ ಎನ್ನುತ್ತಾರೆ. ಇನ್ನು ಈ ಬಗ್ಗೆ ದೂರು ನೀಡಲು ದೇವಾಲಯದ ಸಹಾಯವಾಣಿಗೆ ಕರೆ ಮಾಡಿದರೂ ಯಾರೂ ಕರೆ ಸ್ವೀಕರಿಸುವುದಿಲ್ಲ. ಇದರಿಂದಾಗಿ ಭಕ್ತರಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟವರು ಚಪ್ಪಲಿ ಸ್ಟ್ಯಾಂಡಿನ ಬಳಿ ಕೈ-ಕಾಲುಗಳನ್ನು ತೊಳೆದುಕೊಳ್ಳಲು ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ.

-ಶಿವಮೊಗ್ಗ ನಾ.ದಿನೇಶ್ ಅಡಿಗ, ಮೈಸೂರು.

andolana

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

10 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

26 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

43 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

56 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago