Andolana originals

ಓದುಗರ ಪತ್ರ: ಚಾ.ಬೆಟ್ಟದಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಾಲಯಕ್ಕೆ ಬರುವ ಭಕ್ತರಿಗೆ ತಮ್ಮ ಪಾದರಕ್ಷೆಗಳನ್ನು ಚಪ್ಪಲಿ ಸ್ಟಾಂಡಿನಲ್ಲಿಯೇ ಬಿಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಯಾವುದೇ ಅಂಗಡಿ ಮುಂಗಟ್ಟುಗಳ
ಮುಂದೆ ಬಿಡಬಾರದು ಎಂದು ಸೂಚಿಸಲಾಗಿದೆ. ದೇವಾಲಯದ ಆವರಣದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಇದೊಂದು ಸ್ವಾಗತಾರ್ಹ ಕ್ರಮ. ಆದರೆ ನಾವು ಚಪ್ಪಲಿಗಳನ್ನು ಈ ಸ್ಟಾಂಡಿನಲ್ಲಿ ಬಿಡಬೇಕಾದರೆ ಅವುಗಳನ್ನು ಕೈಯಲ್ಲಿ ಎತ್ತಿ ಇಡಬೇಕು. ಆದರೆ ಇಲ್ಲಿ ಚಪ್ಪಲಿ ಮುಟ್ಟಿದ ಕೈಗಳನ್ನು ತೊಳೆದುಕೊಳ್ಳಲು ನೀರಿನ ವ್ಯವಸ್ಥೆಯೇ ಇಲ್ಲ. ಇನ್ನು ದೇವಾಲಯದ ಟಿಕೆಟ್ ಕೌಂಟರ್ ಬಳಿ ಇರುವ ನೀರಿನ ಘಟಕದಲ್ಲಿಯೂ ನೀರಿನ ಸೌಲಭ್ಯವಿಲ್ಲದೆ ಭಕ್ತರು ಕೈಗಳನ್ನು ತೊಳೆದುಕೊಳ್ಳಲು ಪರದಾಡುವಂತಾಗಿದೆ. ಚಪ್ಪಲಿ ಸ್ಟ್ಯಾಂಡಿನವರ ಬಳಿ ನೀರಿನ ವ್ಯವಸ್ಥೆಯ ಬಗ್ಗೆ ಕೇಳಿದರೆ ಅವರು ದೇವಾಲಯದ ಆಡಳಿತ ಮಂಡಳಿಯವರನ್ನು ಕೇಳಿ ಎನ್ನುತ್ತಾರೆ. ಇನ್ನು ಈ ಬಗ್ಗೆ ದೂರು ನೀಡಲು ದೇವಾಲಯದ ಸಹಾಯವಾಣಿಗೆ ಕರೆ ಮಾಡಿದರೂ ಯಾರೂ ಕರೆ ಸ್ವೀಕರಿಸುವುದಿಲ್ಲ. ಇದರಿಂದಾಗಿ ಭಕ್ತರಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟವರು ಚಪ್ಪಲಿ ಸ್ಟ್ಯಾಂಡಿನ ಬಳಿ ಕೈ-ಕಾಲುಗಳನ್ನು ತೊಳೆದುಕೊಳ್ಳಲು ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ.

-ಶಿವಮೊಗ್ಗ ನಾ.ದಿನೇಶ್ ಅಡಿಗ, ಮೈಸೂರು.

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago