ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಾಲಯಕ್ಕೆ ಬರುವ ಭಕ್ತರಿಗೆ ತಮ್ಮ ಪಾದರಕ್ಷೆಗಳನ್ನು ಚಪ್ಪಲಿ ಸ್ಟಾಂಡಿನಲ್ಲಿಯೇ ಬಿಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಯಾವುದೇ ಅಂಗಡಿ ಮುಂಗಟ್ಟುಗಳ
ಮುಂದೆ ಬಿಡಬಾರದು ಎಂದು ಸೂಚಿಸಲಾಗಿದೆ. ದೇವಾಲಯದ ಆವರಣದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಇದೊಂದು ಸ್ವಾಗತಾರ್ಹ ಕ್ರಮ. ಆದರೆ ನಾವು ಚಪ್ಪಲಿಗಳನ್ನು ಈ ಸ್ಟಾಂಡಿನಲ್ಲಿ ಬಿಡಬೇಕಾದರೆ ಅವುಗಳನ್ನು ಕೈಯಲ್ಲಿ ಎತ್ತಿ ಇಡಬೇಕು. ಆದರೆ ಇಲ್ಲಿ ಚಪ್ಪಲಿ ಮುಟ್ಟಿದ ಕೈಗಳನ್ನು ತೊಳೆದುಕೊಳ್ಳಲು ನೀರಿನ ವ್ಯವಸ್ಥೆಯೇ ಇಲ್ಲ. ಇನ್ನು ದೇವಾಲಯದ ಟಿಕೆಟ್ ಕೌಂಟರ್ ಬಳಿ ಇರುವ ನೀರಿನ ಘಟಕದಲ್ಲಿಯೂ ನೀರಿನ ಸೌಲಭ್ಯವಿಲ್ಲದೆ ಭಕ್ತರು ಕೈಗಳನ್ನು ತೊಳೆದುಕೊಳ್ಳಲು ಪರದಾಡುವಂತಾಗಿದೆ. ಚಪ್ಪಲಿ ಸ್ಟ್ಯಾಂಡಿನವರ ಬಳಿ ನೀರಿನ ವ್ಯವಸ್ಥೆಯ ಬಗ್ಗೆ ಕೇಳಿದರೆ ಅವರು ದೇವಾಲಯದ ಆಡಳಿತ ಮಂಡಳಿಯವರನ್ನು ಕೇಳಿ ಎನ್ನುತ್ತಾರೆ. ಇನ್ನು ಈ ಬಗ್ಗೆ ದೂರು ನೀಡಲು ದೇವಾಲಯದ ಸಹಾಯವಾಣಿಗೆ ಕರೆ ಮಾಡಿದರೂ ಯಾರೂ ಕರೆ ಸ್ವೀಕರಿಸುವುದಿಲ್ಲ. ಇದರಿಂದಾಗಿ ಭಕ್ತರಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟವರು ಚಪ್ಪಲಿ ಸ್ಟ್ಯಾಂಡಿನ ಬಳಿ ಕೈ-ಕಾಲುಗಳನ್ನು ತೊಳೆದುಕೊಳ್ಳಲು ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ.
-ಶಿವಮೊಗ್ಗ ನಾ.ದಿನೇಶ್ ಅಡಿಗ, ಮೈಸೂರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…