ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಾಲಯಕ್ಕೆ ಬರುವ ಭಕ್ತರಿಗೆ ತಮ್ಮ ಪಾದರಕ್ಷೆಗಳನ್ನು ಚಪ್ಪಲಿ ಸ್ಟಾಂಡಿನಲ್ಲಿಯೇ ಬಿಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಯಾವುದೇ ಅಂಗಡಿ ಮುಂಗಟ್ಟುಗಳ
ಮುಂದೆ ಬಿಡಬಾರದು ಎಂದು ಸೂಚಿಸಲಾಗಿದೆ. ದೇವಾಲಯದ ಆವರಣದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಇದೊಂದು ಸ್ವಾಗತಾರ್ಹ ಕ್ರಮ. ಆದರೆ ನಾವು ಚಪ್ಪಲಿಗಳನ್ನು ಈ ಸ್ಟಾಂಡಿನಲ್ಲಿ ಬಿಡಬೇಕಾದರೆ ಅವುಗಳನ್ನು ಕೈಯಲ್ಲಿ ಎತ್ತಿ ಇಡಬೇಕು. ಆದರೆ ಇಲ್ಲಿ ಚಪ್ಪಲಿ ಮುಟ್ಟಿದ ಕೈಗಳನ್ನು ತೊಳೆದುಕೊಳ್ಳಲು ನೀರಿನ ವ್ಯವಸ್ಥೆಯೇ ಇಲ್ಲ. ಇನ್ನು ದೇವಾಲಯದ ಟಿಕೆಟ್ ಕೌಂಟರ್ ಬಳಿ ಇರುವ ನೀರಿನ ಘಟಕದಲ್ಲಿಯೂ ನೀರಿನ ಸೌಲಭ್ಯವಿಲ್ಲದೆ ಭಕ್ತರು ಕೈಗಳನ್ನು ತೊಳೆದುಕೊಳ್ಳಲು ಪರದಾಡುವಂತಾಗಿದೆ. ಚಪ್ಪಲಿ ಸ್ಟ್ಯಾಂಡಿನವರ ಬಳಿ ನೀರಿನ ವ್ಯವಸ್ಥೆಯ ಬಗ್ಗೆ ಕೇಳಿದರೆ ಅವರು ದೇವಾಲಯದ ಆಡಳಿತ ಮಂಡಳಿಯವರನ್ನು ಕೇಳಿ ಎನ್ನುತ್ತಾರೆ. ಇನ್ನು ಈ ಬಗ್ಗೆ ದೂರು ನೀಡಲು ದೇವಾಲಯದ ಸಹಾಯವಾಣಿಗೆ ಕರೆ ಮಾಡಿದರೂ ಯಾರೂ ಕರೆ ಸ್ವೀಕರಿಸುವುದಿಲ್ಲ. ಇದರಿಂದಾಗಿ ಭಕ್ತರಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟವರು ಚಪ್ಪಲಿ ಸ್ಟ್ಯಾಂಡಿನ ಬಳಿ ಕೈ-ಕಾಲುಗಳನ್ನು ತೊಳೆದುಕೊಳ್ಳಲು ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ.
-ಶಿವಮೊಗ್ಗ ನಾ.ದಿನೇಶ್ ಅಡಿಗ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…