ರಾಜ್ಯದ ಹತ್ತು ನಗರ ಪಾಲಿಕೆಗಳಿಗೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಎಲ್ಲ ನಗರ ಪಾಲಿಕೆ ಗಳಿಗೂ ಚುನಾವಣೆ ಯಾವಾಗ ನಡೆಯುತ್ತದೆ ಎಂಬುದೇ ತಿಳಿದಿಲ್ಲ. ಅಲ್ಲದೆ ಸದ್ಯಕ್ಕೆ ಚುನಾವಣೆ ನಡೆಸುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ. ಒಂದು ವೇಳೆ ಚುನಾವಣೆ ನಡೆದರೂ ಮೇಯರ್ ಮತ್ತು ಉಪ ಮೇಯರ್ಗಳು ಆಯ್ಕೆಯಾಗಲು ಕನಿಷ್ಠವೆಂದರೂ 6-7 ತಿಂಗಳುಗಳಾದರೂ ಬೇಕು.
ಹೀಗಿರುವಾಗ ರಾಜ್ಯ ಸರ್ಕಾರಕ್ಕೆ ತರಾತುರಿಯಲ್ಲಿ ಮೇಯರ್ ಮತ್ತು ಉಪಮೇಯರ್ ಸ್ಥಾನಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸುವ ಅನಿ ವಾರ್ಯವೇನಿತ್ತು? ಎಂಬ ಪ್ರಶ್ನೆ ಮೂಡಿದ್ದು, ಇದರಲ್ಲಿ ರಾಜಕೀಯ ಉದ್ದೇಶ ವಿರಬಹುದು ಎಂಬ ಅನುಮಾನ ಕಾಡುತ್ತಿದೆ. ಚುನಾವಣೆಗೆ ಇನ್ನೂ ಸಾಕಷ್ಟು ತಿಂಗಳುಗಳು ಬಾಕಿ ಇರುವಾಗಲೇ ಮೀಸಲಾಯಿತಿಯನ್ನು ಪ್ರಕಟಿಸಿರುವುದರಿಂದ ಜನರು ಗೊಂದಲಕ್ಕೀಡಾಗಿದ್ದು, ಇದು ಈಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರ ವಿರಬಹುದೇನೋ ಅನಿಸುತ್ತದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…