ರಾಜ್ಯದ ಹತ್ತು ನಗರ ಪಾಲಿಕೆಗಳಿಗೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಎಲ್ಲ ನಗರ ಪಾಲಿಕೆ ಗಳಿಗೂ ಚುನಾವಣೆ ಯಾವಾಗ ನಡೆಯುತ್ತದೆ ಎಂಬುದೇ ತಿಳಿದಿಲ್ಲ. ಅಲ್ಲದೆ ಸದ್ಯಕ್ಕೆ ಚುನಾವಣೆ ನಡೆಸುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ. ಒಂದು ವೇಳೆ ಚುನಾವಣೆ ನಡೆದರೂ ಮೇಯರ್ ಮತ್ತು ಉಪ ಮೇಯರ್ಗಳು ಆಯ್ಕೆಯಾಗಲು ಕನಿಷ್ಠವೆಂದರೂ 6-7 ತಿಂಗಳುಗಳಾದರೂ ಬೇಕು.
ಹೀಗಿರುವಾಗ ರಾಜ್ಯ ಸರ್ಕಾರಕ್ಕೆ ತರಾತುರಿಯಲ್ಲಿ ಮೇಯರ್ ಮತ್ತು ಉಪಮೇಯರ್ ಸ್ಥಾನಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸುವ ಅನಿ ವಾರ್ಯವೇನಿತ್ತು? ಎಂಬ ಪ್ರಶ್ನೆ ಮೂಡಿದ್ದು, ಇದರಲ್ಲಿ ರಾಜಕೀಯ ಉದ್ದೇಶ ವಿರಬಹುದು ಎಂಬ ಅನುಮಾನ ಕಾಡುತ್ತಿದೆ. ಚುನಾವಣೆಗೆ ಇನ್ನೂ ಸಾಕಷ್ಟು ತಿಂಗಳುಗಳು ಬಾಕಿ ಇರುವಾಗಲೇ ಮೀಸಲಾಯಿತಿಯನ್ನು ಪ್ರಕಟಿಸಿರುವುದರಿಂದ ಜನರು ಗೊಂದಲಕ್ಕೀಡಾಗಿದ್ದು, ಇದು ಈಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರ ವಿರಬಹುದೇನೋ ಅನಿಸುತ್ತದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…