ಓದುಗರ ಪತ್ರ
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ ಇರಿಸುವ ಬದಲು ಎಲ್ಲೆಂದರಲ್ಲಿ ಬೀಸಾಡಿ ಅಸಡ್ಡೆ ತೋರಲಾಗುತ್ತಿದೆ. ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ( ಲೊಬೋಸ್ ಬಾರ್ ಅಂಡ್ ರೆಸ್ಟೋರೆಂಟ್) ಮಧ್ಯೆ ಇರುವ ಮರ ಗಿಡಗಳ ಮಧ್ಯೆ ಬ್ಯಾರಿಕೇಡ್ಗಳು ಬೇಕಾಬಿಟ್ಟಿಯಾಗಿ ಬಿದ್ದಿವೆ. ೨೦೨೫ರ ದಸರಾ ಮಹೋತ್ಸವ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದಲ್ಲಿ ನಡೆದ ಯುವ ಸಂಭ್ರಮ ಕಾರ್ಯ ಕ್ರಮದ ವೇಳೆ ಬಳಸಲಾದ ಬ್ಯಾರಿಕೇಡ್ಗಳು ಇಂದಿಗೂ ಮೈಸೂರು ವಿವಿ ವಾಣಿಜ್ಯ ಶಾಸ್ತ್ರ ಅಧ್ಯಯನ ವಿಭಾಗದ ಹಿಂದಿರುವ ಪೋಸ್ಟ್ ಆಫೀಸ್ ಮುಂದಿನ ರಸ್ತೆಯಲ್ಲಿ ಅನಾಥವಾಗಿ ಬಿದ್ದಿವೆ. ಕುವೆಂಪು ಸ್ಮಾರಕ ಇರುವ ಮುಖ್ಯ ದ್ವಾರದ ಬಳಿ ಮೋರಿಯ ಪಕ್ಕದಲ್ಲಿ ಕೂಡ ಬ್ಯಾರಿಕೇಡ್ಗಳು ಬಿದ್ದು ತುಕ್ಕು ಹಿಡಿಯುತ್ತಿವೆ. ಈ ಬ್ಯಾರಿಕೇಡ್ಗಳನ್ನು ಬ್ಯಾಂಕ್ಗಳು, ರೋಟರಿ,ಲಯನ್ಸ್ ಕ್ಲಬ್ ಮುಂತಾದ ಅನೇಕ ಸೇವಾ ಸಂಸ್ಥೆಗಳು ಸಾರ್ವಜನಿಕ ಹಿತಾಸಕ್ತಿಗೆ ಬಳಕೆಯಾಗಲಿ ಎಂಬ ಸದುದ್ದೇಶದಿಂದ ಕೊಡುಗೆಯಾಗಿ ನೀಡಿರುತ್ತವೆ. ಅದಕ್ಕೆ ಸಾಕಷ್ಟು ಹಣ ಖರ್ಚಾಗಿರುತ್ತದೆ ಅಲ್ಲವೆ? ಆದ್ದರಿಂದ ಮೈಸೂರು ನಗರದ ಅನೇಕ ರಸ್ತೆಗಳ ಬದಿಯಲ್ಲಿ ಬಳಕೆಯಾದ ನಂತರ ಅನಾಥವಾಗಿ ಬಿದ್ದಿರುವ ಬ್ಯಾರಿಕೇಡ್ಗಳನ್ನು ಸುರಕ್ಷಿತವಾಗಿ ಇರಿಸಲು ಮೈಸೂರು ನಗರ ಪೊಲೀಸ್ ಅಧಿಕಾರಿಗಳು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಸೂಚಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…