Andolana originals

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ ಇರಿಸುವ ಬದಲು ಎಲ್ಲೆಂದರಲ್ಲಿ ಬೀಸಾಡಿ ಅಸಡ್ಡೆ ತೋರಲಾಗುತ್ತಿದೆ. ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ( ಲೊಬೋಸ್ ಬಾರ್ ಅಂಡ್ ರೆಸ್ಟೋರೆಂಟ್) ಮಧ್ಯೆ ಇರುವ ಮರ ಗಿಡಗಳ ಮಧ್ಯೆ ಬ್ಯಾರಿಕೇಡ್‌ಗಳು ಬೇಕಾಬಿಟ್ಟಿಯಾಗಿ ಬಿದ್ದಿವೆ. ೨೦೨೫ರ ದಸರಾ ಮಹೋತ್ಸವ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದಲ್ಲಿ ನಡೆದ ಯುವ ಸಂಭ್ರಮ ಕಾರ್ಯ ಕ್ರಮದ ವೇಳೆ ಬಳಸಲಾದ ಬ್ಯಾರಿಕೇಡ್‌ಗಳು ಇಂದಿಗೂ ಮೈಸೂರು ವಿವಿ ವಾಣಿಜ್ಯ ಶಾಸ್ತ್ರ ಅಧ್ಯಯನ ವಿಭಾಗದ ಹಿಂದಿರುವ ಪೋಸ್ಟ್ ಆಫೀಸ್ ಮುಂದಿನ ರಸ್ತೆಯಲ್ಲಿ ಅನಾಥವಾಗಿ ಬಿದ್ದಿವೆ. ಕುವೆಂಪು ಸ್ಮಾರಕ ಇರುವ ಮುಖ್ಯ ದ್ವಾರದ ಬಳಿ ಮೋರಿಯ ಪಕ್ಕದಲ್ಲಿ ಕೂಡ ಬ್ಯಾರಿಕೇಡ್‌ಗಳು ಬಿದ್ದು ತುಕ್ಕು ಹಿಡಿಯುತ್ತಿವೆ. ಈ ಬ್ಯಾರಿಕೇಡ್‌ಗಳನ್ನು ಬ್ಯಾಂಕ್‌ಗಳು, ರೋಟರಿ,ಲಯನ್ಸ್ ಕ್ಲಬ್ ಮುಂತಾದ ಅನೇಕ ಸೇವಾ ಸಂಸ್ಥೆಗಳು ಸಾರ್ವಜನಿಕ ಹಿತಾಸಕ್ತಿಗೆ ಬಳಕೆಯಾಗಲಿ ಎಂಬ ಸದುದ್ದೇಶದಿಂದ ಕೊಡುಗೆಯಾಗಿ ನೀಡಿರುತ್ತವೆ. ಅದಕ್ಕೆ ಸಾಕಷ್ಟು ಹಣ ಖರ್ಚಾಗಿರುತ್ತದೆ ಅಲ್ಲವೆ? ಆದ್ದರಿಂದ ಮೈಸೂರು ನಗರದ ಅನೇಕ ರಸ್ತೆಗಳ ಬದಿಯಲ್ಲಿ ಬಳಕೆಯಾದ ನಂತರ ಅನಾಥವಾಗಿ ಬಿದ್ದಿರುವ ಬ್ಯಾರಿಕೇಡ್‌ಗಳನ್ನು ಸುರಕ್ಷಿತವಾಗಿ ಇರಿಸಲು ಮೈಸೂರು ನಗರ ಪೊಲೀಸ್ ಅಧಿಕಾರಿಗಳು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಸೂಚಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

7 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

7 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

8 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

9 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

9 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

10 hours ago