Andolana originals

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ ಎಂದರೆ ಅದೊಂದು ಮೋಜಿನಾಟ ಎಂಬಂತಾಗಿದೆ. ಕೆಲವರು ಪಟಾಕಿಗಳನ್ನು ಸಿಡಿಸುತ್ತಾ, ಸಂಗೀತ ಗೋಷ್ಠಿಗಳಿಗೆ ಭೇಟಿ ನೀಡುತ್ತಾ ದಿನವನ್ನು ಸಂತೋಷದಿಂದ ಕಳೆದರೆ, ಇನ್ನೂ ಹಲವರದು ಕೇವಲ ಮೋಜು, ಮಸ್ತಿ, ಕುಡಿತ, ಕುಣಿತ… ಇಷ್ಟಕ್ಕೇ ಹೊಸ ವರ್ಷಾಚರಣೆ ಸೀಮಿತವಾಗಿರುತ್ತದೆ.

ಹೊಸ ವರ್ಷದ ಸಂಭ್ರಮಾಚರಣೆಯನ್ನು ಕೇವಲ ಒಂದೆರಡು ದಿನಗಳಿಗೆ ಸೀಮಿತಗೊಳಿಸದೆ, ವರ್ಷಪೂರ್ತಿ ಆರೋಗ್ಯಕರ ಜೀವನ, ಹಣ ಉಳಿತಾಯ, ಪ್ರಯಾಣದಂತಹ ಹೊಸ ಹೊಸ ಗುರಿಗಳನ್ನು ಹಾಕಿಕೊಳ್ಳುವುದು ಹೆಚ್ಚು ಸೂಕ್ತ ಅನಿಸುತ್ತದೆ. ಹೊಸ ವರ್ಷ ೨೦೨೬ ಎಂದರೆ ಕೇವಲ ದಿನಾಂಕ ಬದಲಾವಣೆ ಅಲ್ಲ, ಅದು ಜೀವನವನ್ನು ಹೊಸ ದೃಷ್ಟಿಕೋನದಿಂದ ನೋಡಲು ಸಿಗುವ ಮತ್ತೊಂದು ಅವಕಾಶ. ಹಳೆಯ ವರ್ಷದಲ್ಲಿ ಸಾಧಿಸಿದವುಗಳು, ತಪ್ಪಿದ ಗುರಿಗಳು ಮತ್ತು ಕಲಿತ ಪಾಠಗಳನ್ನು ಮನದಲ್ಲಿಟ್ಟುಕೊಂಡು ಮುಂದಿನ ವರ್ಷಕ್ಕೆ ಹೊಸ ನಿರ್ಣಯಗಳನ್ನು ಮಾಡಬೇಕಿದೆ. ಈ ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ, ದಯೆಯಿಂದ ಇರುತ್ತೇವೆ, ಕಷ್ಟಪಟ್ಟು ಕೆಲಸ ಮಾಡುತ್ತೇವೆ ಮತ್ತು ಬರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುತ್ತೇವೆ ಎಂದು ಪ್ರತಿಜ್ಞೆ ಮಾಡೋಣ. ನವ ವರ್ಷದ ಆಗಮನ ಪರಸ್ಪರ ಶುಭಕಾಮನೆಗಳ ವಿನಿಮಯಕ್ಕೆ ಮೋಜು-ಮಸ್ತಿಗೆ ಮಾತ್ರ ಅಂತ ಸೀಮಿತಗೊಳಿಸದೆ, ಬರುವ ಹೊಸ ವರ್ಷದಲ್ಲಿ ದೊಡ್ಡ ಸಂಕಲ್ಪಗಳ ಸಾಕಾರಕ್ಕೆ ಮುಂದಾಗೋಣ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

11 mins ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

29 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

36 mins ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ…

39 mins ago

ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

49 mins ago

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…

52 mins ago