ಓದುಗರ ಪತ್ರ
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ ಎಂದರೆ ಅದೊಂದು ಮೋಜಿನಾಟ ಎಂಬಂತಾಗಿದೆ. ಕೆಲವರು ಪಟಾಕಿಗಳನ್ನು ಸಿಡಿಸುತ್ತಾ, ಸಂಗೀತ ಗೋಷ್ಠಿಗಳಿಗೆ ಭೇಟಿ ನೀಡುತ್ತಾ ದಿನವನ್ನು ಸಂತೋಷದಿಂದ ಕಳೆದರೆ, ಇನ್ನೂ ಹಲವರದು ಕೇವಲ ಮೋಜು, ಮಸ್ತಿ, ಕುಡಿತ, ಕುಣಿತ… ಇಷ್ಟಕ್ಕೇ ಹೊಸ ವರ್ಷಾಚರಣೆ ಸೀಮಿತವಾಗಿರುತ್ತದೆ.
ಹೊಸ ವರ್ಷದ ಸಂಭ್ರಮಾಚರಣೆಯನ್ನು ಕೇವಲ ಒಂದೆರಡು ದಿನಗಳಿಗೆ ಸೀಮಿತಗೊಳಿಸದೆ, ವರ್ಷಪೂರ್ತಿ ಆರೋಗ್ಯಕರ ಜೀವನ, ಹಣ ಉಳಿತಾಯ, ಪ್ರಯಾಣದಂತಹ ಹೊಸ ಹೊಸ ಗುರಿಗಳನ್ನು ಹಾಕಿಕೊಳ್ಳುವುದು ಹೆಚ್ಚು ಸೂಕ್ತ ಅನಿಸುತ್ತದೆ. ಹೊಸ ವರ್ಷ ೨೦೨೬ ಎಂದರೆ ಕೇವಲ ದಿನಾಂಕ ಬದಲಾವಣೆ ಅಲ್ಲ, ಅದು ಜೀವನವನ್ನು ಹೊಸ ದೃಷ್ಟಿಕೋನದಿಂದ ನೋಡಲು ಸಿಗುವ ಮತ್ತೊಂದು ಅವಕಾಶ. ಹಳೆಯ ವರ್ಷದಲ್ಲಿ ಸಾಧಿಸಿದವುಗಳು, ತಪ್ಪಿದ ಗುರಿಗಳು ಮತ್ತು ಕಲಿತ ಪಾಠಗಳನ್ನು ಮನದಲ್ಲಿಟ್ಟುಕೊಂಡು ಮುಂದಿನ ವರ್ಷಕ್ಕೆ ಹೊಸ ನಿರ್ಣಯಗಳನ್ನು ಮಾಡಬೇಕಿದೆ. ಈ ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ, ದಯೆಯಿಂದ ಇರುತ್ತೇವೆ, ಕಷ್ಟಪಟ್ಟು ಕೆಲಸ ಮಾಡುತ್ತೇವೆ ಮತ್ತು ಬರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುತ್ತೇವೆ ಎಂದು ಪ್ರತಿಜ್ಞೆ ಮಾಡೋಣ. ನವ ವರ್ಷದ ಆಗಮನ ಪರಸ್ಪರ ಶುಭಕಾಮನೆಗಳ ವಿನಿಮಯಕ್ಕೆ ಮೋಜು-ಮಸ್ತಿಗೆ ಮಾತ್ರ ಅಂತ ಸೀಮಿತಗೊಳಿಸದೆ, ಬರುವ ಹೊಸ ವರ್ಷದಲ್ಲಿ ದೊಡ್ಡ ಸಂಕಲ್ಪಗಳ ಸಾಕಾರಕ್ಕೆ ಮುಂದಾಗೋಣ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…