Andolana originals

ಓದುಗರ ಪತ್ರ: ಹೊಸ ವರ್ಷಾಚರಣೆ; ಪೊಲೀಸರು ಎಚ್ಚರ ವಹಿಸಲಿ

೨೦೨೪ನೇ ವರ್ಷ ಮುಗಿದು ೨೦೨೫ನೇ ವರ್ಷ ಬರುತ್ತಿದೆ. ಮೈಸೂರಿನಲ್ಲಿ ಹೊಸ ವರ್ಷದ ಹಿಂದಿನ ದಿನ ಮೈಸೂರಿನ ಪ್ರವಾಸಿ ಸ್ಥಳಗಳಿಗೆ ಬಿಗಿ ಭದ್ರತೆಗೋಸ್ಕರ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕು. ಹೌದು ಕಳೆದ ವರ್ಷ ಮೈಸೂರಿನ ಹಲವು ಕಡೆ ಪುಂಡರು ಮದ್ಯಪಾನ ಮಾಡಿ ಪುಂಡಾಟ ನಡೆಸಿದ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿತ್ತು. ಈ ವರ್ಷ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಪ್ರಯುಕ್ತ ಮೈಸೂರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇರುವುದರಿಂದ ಮೈಸೂರು ನಗರದಲ್ಲಿ ಯಾವುದೇ ತೊಂದರೆಗಳು ಆಗದಂತೆ ಹೆಚ್ಚುವರಿ ಪೊಲೀಸ್ ವ್ಯವಸ್ಥೆಯನ್ನು ಕಲ್ಪಿಸಬೇಕು. ನಗರದ ಅರಮನೆ, ಸೇಂಟ್ ಫಿಲೋಮಿನಾ ಚರ್ಚ್, ಚಾಮುಂಡಿ ಬೆಟ್ಟ ಮುಂತಾದ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಬೇಕು. ಹೊಸ ವರ್ಷ ಮತ್ತು ಹೊಸ ವರ್ಷದ ಹಿಂದಿನ ರಾತ್ರಿ ಪೊಲೀಸರು ಹೆಚ್ಚು ಗಸ್ತು ತಿರುಗಬೇಕು. ಈ ಬಗ್ಗೆ ಯಾವುದೇ ತೊಂದರೆಗಳು ಆಗದಂತೆ ಭದ್ರತೆ ಕಲ್ಪಿಸಲು ನಗರ ಪೊಲೀಸ್ ಆಯುಕ್ತರು ಕ್ರಮ ವಹಿಸಬೇಕು.

-ಸಿ.ಎನ್.ಅಭಿಷೇಕ್, ಮೈಸೂರು.

ಆಂದೋಲನ ಡೆಸ್ಕ್

Recent Posts

ಬಳ್ಳೂರುಹುಂಡಿಯಲ್ಲಿ ಕಾಡಾನೆಗಳ ಹಾವಳಿ : ಸಲಗಗಳ ಕಾಟಕ್ಕೆ ಬೇಸತ್ತ ಜನ

ನಂಜನಗೂಡು : ಇತ್ತೀಚಿನ ದಿನಗಳಲ್ಲಿ ನಂಜನಗೂಡಿನ ಕಾಡಂಚಿನ ಭಾಗಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕಾಡಾನೆಗಳಿಂದ ತಮ್ಮ ಕೃಷಿ ಉಳಿಸುವ ಜೊತೆಗೆ…

8 mins ago

ಬಿಳಿರಂಗನಬೆಟ್ಟದಲ್ಲಿ ಅಗ್ನಿ ಅವಘಡ : ಹೊತ್ತಿ ಉರಿದ ಹೋಟೆಲ್‌, ಅಂಗಡಿ ಮಳಿಗೆಗಳು

ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ…

38 mins ago

ಓದುಗರ ಪತ್ರ: ರಾಜಕಾರಣಿಗಳು ಜವಾಬ್ದಾರಿಯಿಂದ ವರ್ತಿಸಲಿ

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ…

5 hours ago

ಓದುಗರ ಪತ್ರ: ಪ್ರಶ್ನೆ ಪತ್ರಿಕೆ ಸೋರಿಕೆ ಎಂಬ ನಿರಂತರ ಶಾಪ

ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ…

5 hours ago

ಓದುಗರ ಪತ್ರ: ಶಾಲೆಗಳಲ್ಲಿ ಕನ್ನಡ ದಿನ ದಿನಪತ್ರಿಕೆಗಳ ಓದು ಕಡ್ಡಾಯವಾಗಲಿ

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು – ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

6 hours ago