ಓದುಗರ ಪತ್ರ
೨೦೨೪ನೇ ವರ್ಷ ಮುಗಿದು ೨೦೨೫ನೇ ವರ್ಷ ಬರುತ್ತಿದೆ. ಮೈಸೂರಿನಲ್ಲಿ ಹೊಸ ವರ್ಷದ ಹಿಂದಿನ ದಿನ ಮೈಸೂರಿನ ಪ್ರವಾಸಿ ಸ್ಥಳಗಳಿಗೆ ಬಿಗಿ ಭದ್ರತೆಗೋಸ್ಕರ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕು. ಹೌದು ಕಳೆದ ವರ್ಷ ಮೈಸೂರಿನ ಹಲವು ಕಡೆ ಪುಂಡರು ಮದ್ಯಪಾನ ಮಾಡಿ ಪುಂಡಾಟ ನಡೆಸಿದ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿತ್ತು. ಈ ವರ್ಷ ಕ್ರಿಸ್ಮಸ್ ಮತ್ತು ಹೊಸ ವರ್ಷದ ಪ್ರಯುಕ್ತ ಮೈಸೂರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇರುವುದರಿಂದ ಮೈಸೂರು ನಗರದಲ್ಲಿ ಯಾವುದೇ ತೊಂದರೆಗಳು ಆಗದಂತೆ ಹೆಚ್ಚುವರಿ ಪೊಲೀಸ್ ವ್ಯವಸ್ಥೆಯನ್ನು ಕಲ್ಪಿಸಬೇಕು. ನಗರದ ಅರಮನೆ, ಸೇಂಟ್ ಫಿಲೋಮಿನಾ ಚರ್ಚ್, ಚಾಮುಂಡಿ ಬೆಟ್ಟ ಮುಂತಾದ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಬೇಕು. ಹೊಸ ವರ್ಷ ಮತ್ತು ಹೊಸ ವರ್ಷದ ಹಿಂದಿನ ರಾತ್ರಿ ಪೊಲೀಸರು ಹೆಚ್ಚು ಗಸ್ತು ತಿರುಗಬೇಕು. ಈ ಬಗ್ಗೆ ಯಾವುದೇ ತೊಂದರೆಗಳು ಆಗದಂತೆ ಭದ್ರತೆ ಕಲ್ಪಿಸಲು ನಗರ ಪೊಲೀಸ್ ಆಯುಕ್ತರು ಕ್ರಮ ವಹಿಸಬೇಕು.
-ಸಿ.ಎನ್.ಅಭಿಷೇಕ್, ಮೈಸೂರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…