ಓದುಗರ ಪತ್ರ
ಹಿಂದೂ ಧರ್ಮೀಯರ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಚಾಮುಂಡಿಬೆಟ್ಟವೂ ಒಂದಾಗಿದ್ದು, ನಿತ್ಯ ನೂರಾರು ಭಕ್ತರು ಇಲ್ಲಿಗೆ ಭೇಟಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಾರೆ.
ಚಾಮುಂಡಿಬೆಟ್ಟ ಧಾರ್ಮಿಕ ಕ್ಷೇತ್ರ ಮಾತ್ರವಲ್ಲದೆ, ಒಂದು ಪ್ರವಾಸಿ ತಾಣವೂ ಹೌದು. ಇಲ್ಲಿಗೆ ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಸದ್ಯ ಮೈಸೂರಿನಲ್ಲಿ ನವರಾತ್ರಿ ಉತ್ಸವ ಆರಂಭಗೊಂಡಿದ್ದು, ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಇದರಿಂದಾಗಿ ಪ್ರಾಧಿಕಾರವು ಭಕ್ತರಿಗೆ ಅನುಕೂಲವಾಗಲಿ ಎಂದು ಸೆಪ್ಟೆಂಬರ್ 5ರಿಂದಲೇ ರಾತ್ರಿ ವೇಳೆಯಲ್ಲಿಯೂ ಅನ್ನ ದಾಸೋಹ ನೀಡಲು ಪ್ರಾರಂಭಿಸಿದ್ದು, ಇದೊಂದು ಉತ್ತಮ ಬೆಳವಣಿಗೆಯಾಗಿದೆ.
ಮಹದೇಶ್ವರ ಬೆಟ್ಟದಲ್ಲಿಯೂ ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ವೇಳೆ ಭಕ್ತರಿಗೆ ದಾಸೋಹ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿಯೇ ಈಗ ಚಾಮುಂಡಿಬೆಟ್ಟದಲ್ಲಿಯೂ ಅನ್ನ ದಾಸೋಹ ನೀಡುತ್ತಿರುವುದು ಭಕ್ತರಿಗೆ ಅನುಕೂಲವಾಗಲಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…