ಓದುಗರ ಪತ್ರ
ಹಿಂದೂ ಧರ್ಮೀಯರ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಚಾಮುಂಡಿಬೆಟ್ಟವೂ ಒಂದಾಗಿದ್ದು, ನಿತ್ಯ ನೂರಾರು ಭಕ್ತರು ಇಲ್ಲಿಗೆ ಭೇಟಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಾರೆ.
ಚಾಮುಂಡಿಬೆಟ್ಟ ಧಾರ್ಮಿಕ ಕ್ಷೇತ್ರ ಮಾತ್ರವಲ್ಲದೆ, ಒಂದು ಪ್ರವಾಸಿ ತಾಣವೂ ಹೌದು. ಇಲ್ಲಿಗೆ ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಸದ್ಯ ಮೈಸೂರಿನಲ್ಲಿ ನವರಾತ್ರಿ ಉತ್ಸವ ಆರಂಭಗೊಂಡಿದ್ದು, ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಇದರಿಂದಾಗಿ ಪ್ರಾಧಿಕಾರವು ಭಕ್ತರಿಗೆ ಅನುಕೂಲವಾಗಲಿ ಎಂದು ಸೆಪ್ಟೆಂಬರ್ 5ರಿಂದಲೇ ರಾತ್ರಿ ವೇಳೆಯಲ್ಲಿಯೂ ಅನ್ನ ದಾಸೋಹ ನೀಡಲು ಪ್ರಾರಂಭಿಸಿದ್ದು, ಇದೊಂದು ಉತ್ತಮ ಬೆಳವಣಿಗೆಯಾಗಿದೆ.
ಮಹದೇಶ್ವರ ಬೆಟ್ಟದಲ್ಲಿಯೂ ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ವೇಳೆ ಭಕ್ತರಿಗೆ ದಾಸೋಹ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿಯೇ ಈಗ ಚಾಮುಂಡಿಬೆಟ್ಟದಲ್ಲಿಯೂ ಅನ್ನ ದಾಸೋಹ ನೀಡುತ್ತಿರುವುದು ಭಕ್ತರಿಗೆ ಅನುಕೂಲವಾಗಲಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…