ಓದುಗರ ಪತ್ರ
ಹಿಂದೂ ಧರ್ಮೀಯರ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಚಾಮುಂಡಿಬೆಟ್ಟವೂ ಒಂದಾಗಿದ್ದು, ನಿತ್ಯ ನೂರಾರು ಭಕ್ತರು ಇಲ್ಲಿಗೆ ಭೇಟಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಾರೆ.
ಚಾಮುಂಡಿಬೆಟ್ಟ ಧಾರ್ಮಿಕ ಕ್ಷೇತ್ರ ಮಾತ್ರವಲ್ಲದೆ, ಒಂದು ಪ್ರವಾಸಿ ತಾಣವೂ ಹೌದು. ಇಲ್ಲಿಗೆ ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಸದ್ಯ ಮೈಸೂರಿನಲ್ಲಿ ನವರಾತ್ರಿ ಉತ್ಸವ ಆರಂಭಗೊಂಡಿದ್ದು, ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಇದರಿಂದಾಗಿ ಪ್ರಾಧಿಕಾರವು ಭಕ್ತರಿಗೆ ಅನುಕೂಲವಾಗಲಿ ಎಂದು ಸೆಪ್ಟೆಂಬರ್ 5ರಿಂದಲೇ ರಾತ್ರಿ ವೇಳೆಯಲ್ಲಿಯೂ ಅನ್ನ ದಾಸೋಹ ನೀಡಲು ಪ್ರಾರಂಭಿಸಿದ್ದು, ಇದೊಂದು ಉತ್ತಮ ಬೆಳವಣಿಗೆಯಾಗಿದೆ.
ಮಹದೇಶ್ವರ ಬೆಟ್ಟದಲ್ಲಿಯೂ ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ವೇಳೆ ಭಕ್ತರಿಗೆ ದಾಸೋಹ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿಯೇ ಈಗ ಚಾಮುಂಡಿಬೆಟ್ಟದಲ್ಲಿಯೂ ಅನ್ನ ದಾಸೋಹ ನೀಡುತ್ತಿರುವುದು ಭಕ್ತರಿಗೆ ಅನುಕೂಲವಾಗಲಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…