ಓದುಗರ ಪತ್ರ
ಸಮಾಜ ಸುಧಾರಣೆಗಾಗಿ ಶ್ರಮಿಸಿದ ಭಕ್ತ ಕನಕದಾಸರು, ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಮೊದಲಾದ ಮಹಾಪುರುಷರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಉಪಸ್ಥಿತರಿರುವ ರಾಜಕಾರಣಿಗಳು, ಉದ್ಯಮಿಗಳನ್ನು ‘ಇವರು ಮಹಾ ಪುರುಷರಂತೆಯೇ’ ಎಂದು ಹೋಲಿಸಿ ಹಾಡಿ ಹೊಗಳುವುದನ್ನು ಕೆಲವರು ರೂಢಿಸಿಕೊಂಡಿದ್ದಾರೆ. ಇದು ಸಲ್ಲದ್ದು.
ಸ್ವಂತಕ್ಕಾಗಿ ಏನನ್ನೂ ಇಟ್ಟುಕೊಳ್ಳದೆ ಸಮಾಜಕ್ಕಾಗಿ ಸರ್ವಸ್ವವನ್ನೂ ಸಮರ್ಪಿಸಿದ ಮಹಾಪುರುಷರನ್ನು ಅಧಿಕಾರ ಹಾಗೂ ಆಸ್ತಿ ಗಳಿಕೆಗೆ ಸೀಮಿತರಾಗಿರುವ ರಾಜಕಾರಣಿಗಳು, ಉದ್ಯಮಿಗಳಿಗೆ ಹೋಲಿಸುವುದು ಸರಿಯಲ್ಲ. ಮಹಾಪುರುಷರ ಜೀವನ ಮತ್ತು ಸಾಧನೆ ಸಮಾಜಕ್ಕೆ ಮಾರ್ಗದರ್ಶಕವಾಗಿರುತ್ತದೆ. ಆದರೆ ಸ್ವಂತಕ್ಕಾಗಿಯೇ ಸದಾಕಾಲ ಚಿಂತಿಸುವ ರಾಜಕಾರಣಿಗಳು ಹಾಗೂ ಉದ್ಯಮಿಗಳಿಗೂ ಮಹಾ ಪುರುಷರ ಚಿಂತನೆಗಳಿಗೂ ಅಜಗಜಾಂತರ ವ್ಯತ್ಯಾಸವಿರುತ್ತದೆ.
ಮಹಾಪುರುಷರಿಗೆ ಮಹಾಪುರುಷರೇ ಸಾಟಿಯೇ ಹೊರತು ಬೇರಾರೂ ಅವರಿಗೆ ಸರಿಸಮಾನರಲ್ಲ. ಇನ್ನು ಮುಂದಾದರೂ ಸಭೆ, ಸಮಾರಂಭಗಳಲ್ಲಿ ರಾಜಕಾರಣಿಗಳನ್ನು ಮಹಾಪುರುಷರಿಗೆ ಹೋಲಿಕೆ ಮಾಡಿ ಹಾಡಿ ಹೊಗಳುವುದನ್ನು ನಿಲ್ಲಿಸಬೇಕು.
-ಎ.ಜಿ.ಚಂದ್ರಲಾ, ಪ್ರಥಮ ಬಿ.ಎ., ಮಹಾರಾಜ ಕಾಲೇಜು, ಮೈಸೂರು
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…
ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…
ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…