ಓದುಗರ ಪತ್ರ
ಸಮಾಜ ಸುಧಾರಣೆಗಾಗಿ ಶ್ರಮಿಸಿದ ಭಕ್ತ ಕನಕದಾಸರು, ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಮೊದಲಾದ ಮಹಾಪುರುಷರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಉಪಸ್ಥಿತರಿರುವ ರಾಜಕಾರಣಿಗಳು, ಉದ್ಯಮಿಗಳನ್ನು ‘ಇವರು ಮಹಾ ಪುರುಷರಂತೆಯೇ’ ಎಂದು ಹೋಲಿಸಿ ಹಾಡಿ ಹೊಗಳುವುದನ್ನು ಕೆಲವರು ರೂಢಿಸಿಕೊಂಡಿದ್ದಾರೆ. ಇದು ಸಲ್ಲದ್ದು.
ಸ್ವಂತಕ್ಕಾಗಿ ಏನನ್ನೂ ಇಟ್ಟುಕೊಳ್ಳದೆ ಸಮಾಜಕ್ಕಾಗಿ ಸರ್ವಸ್ವವನ್ನೂ ಸಮರ್ಪಿಸಿದ ಮಹಾಪುರುಷರನ್ನು ಅಧಿಕಾರ ಹಾಗೂ ಆಸ್ತಿ ಗಳಿಕೆಗೆ ಸೀಮಿತರಾಗಿರುವ ರಾಜಕಾರಣಿಗಳು, ಉದ್ಯಮಿಗಳಿಗೆ ಹೋಲಿಸುವುದು ಸರಿಯಲ್ಲ. ಮಹಾಪುರುಷರ ಜೀವನ ಮತ್ತು ಸಾಧನೆ ಸಮಾಜಕ್ಕೆ ಮಾರ್ಗದರ್ಶಕವಾಗಿರುತ್ತದೆ. ಆದರೆ ಸ್ವಂತಕ್ಕಾಗಿಯೇ ಸದಾಕಾಲ ಚಿಂತಿಸುವ ರಾಜಕಾರಣಿಗಳು ಹಾಗೂ ಉದ್ಯಮಿಗಳಿಗೂ ಮಹಾ ಪುರುಷರ ಚಿಂತನೆಗಳಿಗೂ ಅಜಗಜಾಂತರ ವ್ಯತ್ಯಾಸವಿರುತ್ತದೆ.
ಮಹಾಪುರುಷರಿಗೆ ಮಹಾಪುರುಷರೇ ಸಾಟಿಯೇ ಹೊರತು ಬೇರಾರೂ ಅವರಿಗೆ ಸರಿಸಮಾನರಲ್ಲ. ಇನ್ನು ಮುಂದಾದರೂ ಸಭೆ, ಸಮಾರಂಭಗಳಲ್ಲಿ ರಾಜಕಾರಣಿಗಳನ್ನು ಮಹಾಪುರುಷರಿಗೆ ಹೋಲಿಕೆ ಮಾಡಿ ಹಾಡಿ ಹೊಗಳುವುದನ್ನು ನಿಲ್ಲಿಸಬೇಕು.
-ಎ.ಜಿ.ಚಂದ್ರಲಾ, ಪ್ರಥಮ ಬಿ.ಎ., ಮಹಾರಾಜ ಕಾಲೇಜು, ಮೈಸೂರು
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…