ಓದುಗರ ಪತ್ರ
ಸಮಾಜ ಸುಧಾರಣೆಗಾಗಿ ಶ್ರಮಿಸಿದ ಭಕ್ತ ಕನಕದಾಸರು, ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಮೊದಲಾದ ಮಹಾಪುರುಷರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಉಪಸ್ಥಿತರಿರುವ ರಾಜಕಾರಣಿಗಳು, ಉದ್ಯಮಿಗಳನ್ನು ‘ಇವರು ಮಹಾ ಪುರುಷರಂತೆಯೇ’ ಎಂದು ಹೋಲಿಸಿ ಹಾಡಿ ಹೊಗಳುವುದನ್ನು ಕೆಲವರು ರೂಢಿಸಿಕೊಂಡಿದ್ದಾರೆ. ಇದು ಸಲ್ಲದ್ದು.
ಸ್ವಂತಕ್ಕಾಗಿ ಏನನ್ನೂ ಇಟ್ಟುಕೊಳ್ಳದೆ ಸಮಾಜಕ್ಕಾಗಿ ಸರ್ವಸ್ವವನ್ನೂ ಸಮರ್ಪಿಸಿದ ಮಹಾಪುರುಷರನ್ನು ಅಧಿಕಾರ ಹಾಗೂ ಆಸ್ತಿ ಗಳಿಕೆಗೆ ಸೀಮಿತರಾಗಿರುವ ರಾಜಕಾರಣಿಗಳು, ಉದ್ಯಮಿಗಳಿಗೆ ಹೋಲಿಸುವುದು ಸರಿಯಲ್ಲ. ಮಹಾಪುರುಷರ ಜೀವನ ಮತ್ತು ಸಾಧನೆ ಸಮಾಜಕ್ಕೆ ಮಾರ್ಗದರ್ಶಕವಾಗಿರುತ್ತದೆ. ಆದರೆ ಸ್ವಂತಕ್ಕಾಗಿಯೇ ಸದಾಕಾಲ ಚಿಂತಿಸುವ ರಾಜಕಾರಣಿಗಳು ಹಾಗೂ ಉದ್ಯಮಿಗಳಿಗೂ ಮಹಾ ಪುರುಷರ ಚಿಂತನೆಗಳಿಗೂ ಅಜಗಜಾಂತರ ವ್ಯತ್ಯಾಸವಿರುತ್ತದೆ.
ಮಹಾಪುರುಷರಿಗೆ ಮಹಾಪುರುಷರೇ ಸಾಟಿಯೇ ಹೊರತು ಬೇರಾರೂ ಅವರಿಗೆ ಸರಿಸಮಾನರಲ್ಲ. ಇನ್ನು ಮುಂದಾದರೂ ಸಭೆ, ಸಮಾರಂಭಗಳಲ್ಲಿ ರಾಜಕಾರಣಿಗಳನ್ನು ಮಹಾಪುರುಷರಿಗೆ ಹೋಲಿಕೆ ಮಾಡಿ ಹಾಡಿ ಹೊಗಳುವುದನ್ನು ನಿಲ್ಲಿಸಬೇಕು.
-ಎ.ಜಿ.ಚಂದ್ರಲಾ, ಪ್ರಥಮ ಬಿ.ಎ., ಮಹಾರಾಜ ಕಾಲೇಜು, ಮೈಸೂರು
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…