ಓದುಗರ ಪತ್ರ
ಸಮಾಜ ಸುಧಾರಣೆಗಾಗಿ ಶ್ರಮಿಸಿದ ಭಕ್ತ ಕನಕದಾಸರು, ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಮೊದಲಾದ ಮಹಾಪುರುಷರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಉಪಸ್ಥಿತರಿರುವ ರಾಜಕಾರಣಿಗಳು, ಉದ್ಯಮಿಗಳನ್ನು ‘ಇವರು ಮಹಾ ಪುರುಷರಂತೆಯೇ’ ಎಂದು ಹೋಲಿಸಿ ಹಾಡಿ ಹೊಗಳುವುದನ್ನು ಕೆಲವರು ರೂಢಿಸಿಕೊಂಡಿದ್ದಾರೆ. ಇದು ಸಲ್ಲದ್ದು.
ಸ್ವಂತಕ್ಕಾಗಿ ಏನನ್ನೂ ಇಟ್ಟುಕೊಳ್ಳದೆ ಸಮಾಜಕ್ಕಾಗಿ ಸರ್ವಸ್ವವನ್ನೂ ಸಮರ್ಪಿಸಿದ ಮಹಾಪುರುಷರನ್ನು ಅಧಿಕಾರ ಹಾಗೂ ಆಸ್ತಿ ಗಳಿಕೆಗೆ ಸೀಮಿತರಾಗಿರುವ ರಾಜಕಾರಣಿಗಳು, ಉದ್ಯಮಿಗಳಿಗೆ ಹೋಲಿಸುವುದು ಸರಿಯಲ್ಲ. ಮಹಾಪುರುಷರ ಜೀವನ ಮತ್ತು ಸಾಧನೆ ಸಮಾಜಕ್ಕೆ ಮಾರ್ಗದರ್ಶಕವಾಗಿರುತ್ತದೆ. ಆದರೆ ಸ್ವಂತಕ್ಕಾಗಿಯೇ ಸದಾಕಾಲ ಚಿಂತಿಸುವ ರಾಜಕಾರಣಿಗಳು ಹಾಗೂ ಉದ್ಯಮಿಗಳಿಗೂ ಮಹಾ ಪುರುಷರ ಚಿಂತನೆಗಳಿಗೂ ಅಜಗಜಾಂತರ ವ್ಯತ್ಯಾಸವಿರುತ್ತದೆ.
ಮಹಾಪುರುಷರಿಗೆ ಮಹಾಪುರುಷರೇ ಸಾಟಿಯೇ ಹೊರತು ಬೇರಾರೂ ಅವರಿಗೆ ಸರಿಸಮಾನರಲ್ಲ. ಇನ್ನು ಮುಂದಾದರೂ ಸಭೆ, ಸಮಾರಂಭಗಳಲ್ಲಿ ರಾಜಕಾರಣಿಗಳನ್ನು ಮಹಾಪುರುಷರಿಗೆ ಹೋಲಿಕೆ ಮಾಡಿ ಹಾಡಿ ಹೊಗಳುವುದನ್ನು ನಿಲ್ಲಿಸಬೇಕು.
-ಎ.ಜಿ.ಚಂದ್ರಲಾ, ಪ್ರಥಮ ಬಿ.ಎ., ಮಹಾರಾಜ ಕಾಲೇಜು, ಮೈಸೂರು
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…