ಓದುಗರ ಪತ್ರ
ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಶಾಲೆಗಳಿಗೆ ಅಕ್ಟೋಬರ್ 3ರಿಂದ ಅ.20ರವರೆಗೆ ರಜೆಯನ್ನು ನೀಡಿದೆ. ಆದರೆ ಕೆಲ ಖಾಸಗಿ ಶಾಲೆಗಳು ಸರ್ಕಾರದ ಅದೇಶವನ್ನು ಉಲ್ಲಂಘಿಸಿ ಮಕ್ಕಳಿಗೆ ನೀಡಬೇಕಿದ್ದ ದಸರಾ ರಜೆಯನ್ನು ಕಸಿದುಕೊಂಡುಬಿಟ್ಟಿವೆ.
ಕೆಲ ಶಾಲೆಗಳು ಕೇವಲ ಆಯುಧ ಪೂಜೆ, ವಿಜಯದಶಮಿಗೆ ಮಾತ್ರ ರಜೆ ನೀಡಿದ್ದರೆ, ಕೆಲ ಶಾಲೆಗಳು ಒಂದು ವಾರ ಮಾತ್ರ ರಜೆ ನೀಡಿ ಈಗಾಗಲೇ ಶಾಲೆಗಳನ್ನು ಪುನರಾರಂಭಿಸಿವೆ.
ಸರ್ಕಾರ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಅನ್ವಯವಾಗುವಂತೆ 18 ದಿನಗಳ ದಸರಾ ರಜೆಯನ್ನು ಘೋಷಿಸಿದೆ. ಆದರೆ ಕೆಲ ಖಾಸಗಿ ಶಾಲೆಗಳು ಈ ಆದೇಶ ನಮಗೆ ಅನ್ವಯವಾಗುವುದಿಲ್ಲ ಎಂಬಂತೆ ವರ್ತಿಸುತ್ತಿದ್ದು, ರಜೆ ಮುಗಿಯುವ ಒಂದು ವಾರದ ಮುಂಚಿತವಾಗಿಯೇ ಶಾಲೆಗಳನ್ನು ಪುನರಾರಂಭಿಸಿದ್ದು, ಮಕ್ಕಳು ದಸರಾ ರಜೆಯಿಂದ ವಂಚಿತರಾಗುವಂತೆ ಮಾಡಿವೆ. ಹೀಗಾದರೆ ಮಕ್ಕಳು ದಸರಾ ಮಹೋತ್ಸವವನ್ನು ಕಣ್ತುಂಕೊಳ್ಳುವುದಾದರೂ ಹೇಗೆ? ಸರ್ಕಾರ ಈ ಬಗ್ಗೆ ಗಮನಹರಿಸಿ ರಜೆ ಕಡಿತಗೊಳಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ,
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಜ್ಜೀಪುರದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್ಅನ್ನು ಮಂಡನೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ…
ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಭರವಸೆ ನೀಡಿದಂತೆ…