ಓದುಗರ ಪತ್ರ
ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಶಾಲೆಗಳಿಗೆ ಅಕ್ಟೋಬರ್ 3ರಿಂದ ಅ.20ರವರೆಗೆ ರಜೆಯನ್ನು ನೀಡಿದೆ. ಆದರೆ ಕೆಲ ಖಾಸಗಿ ಶಾಲೆಗಳು ಸರ್ಕಾರದ ಅದೇಶವನ್ನು ಉಲ್ಲಂಘಿಸಿ ಮಕ್ಕಳಿಗೆ ನೀಡಬೇಕಿದ್ದ ದಸರಾ ರಜೆಯನ್ನು ಕಸಿದುಕೊಂಡುಬಿಟ್ಟಿವೆ.
ಕೆಲ ಶಾಲೆಗಳು ಕೇವಲ ಆಯುಧ ಪೂಜೆ, ವಿಜಯದಶಮಿಗೆ ಮಾತ್ರ ರಜೆ ನೀಡಿದ್ದರೆ, ಕೆಲ ಶಾಲೆಗಳು ಒಂದು ವಾರ ಮಾತ್ರ ರಜೆ ನೀಡಿ ಈಗಾಗಲೇ ಶಾಲೆಗಳನ್ನು ಪುನರಾರಂಭಿಸಿವೆ.
ಸರ್ಕಾರ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಅನ್ವಯವಾಗುವಂತೆ 18 ದಿನಗಳ ದಸರಾ ರಜೆಯನ್ನು ಘೋಷಿಸಿದೆ. ಆದರೆ ಕೆಲ ಖಾಸಗಿ ಶಾಲೆಗಳು ಈ ಆದೇಶ ನಮಗೆ ಅನ್ವಯವಾಗುವುದಿಲ್ಲ ಎಂಬಂತೆ ವರ್ತಿಸುತ್ತಿದ್ದು, ರಜೆ ಮುಗಿಯುವ ಒಂದು ವಾರದ ಮುಂಚಿತವಾಗಿಯೇ ಶಾಲೆಗಳನ್ನು ಪುನರಾರಂಭಿಸಿದ್ದು, ಮಕ್ಕಳು ದಸರಾ ರಜೆಯಿಂದ ವಂಚಿತರಾಗುವಂತೆ ಮಾಡಿವೆ. ಹೀಗಾದರೆ ಮಕ್ಕಳು ದಸರಾ ಮಹೋತ್ಸವವನ್ನು ಕಣ್ತುಂಕೊಳ್ಳುವುದಾದರೂ ಹೇಗೆ? ಸರ್ಕಾರ ಈ ಬಗ್ಗೆ ಗಮನಹರಿಸಿ ರಜೆ ಕಡಿತಗೊಳಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ,
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…