ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಲಿಂಗಾಂಬುಧಿ ಕೆರೆಯ ಸಮೀಪದ ಸಸ್ಯೋದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಇಲ್ಲಿ ಯಾವುದೇ ಡಿಜಿಟಲ್ ಸೌಲಭ್ಯವಿಲ್ಲದಿರುವುದರಿಂದ ಬರುವ ಪ್ರವಾಸಿಗರು ಹಣ ನೀಡಿಯೇ ಟಿಕೆಟ್ ಪಡೆಯ ಬೇಕು.
ಇದರಿಂದಾಗಿ ಅನೇಕ ಪ್ರವಾಸಿಗರಿಗೆ ತೊಂದರೆ ಯಾಗುತ್ತಿದೆ. ಇನ್ನು ಇಲ್ಲಿ ನಾವು ಪ್ರವೇಶ ಮಾಡುವ ಸಮಯ ಒಂದಾಗಿದ್ದರೆ ಅವರು ಟಿಕೆಟ್ನಲ್ಲಿ ನಮೂದಿಸುವ ಸಮಯವೇ ಬೇರೆಯಾಗಿರುತ್ತದೆ. ಇದು ಹೇಗೆ ಎಂದು ನೋಡಿದಾಗ, ಅಲ್ಲಿ ನಮಗೆ ನೀಡಿದ ಟಿಕೆಟನ್ನು ವಾಪಸ್ ಪಡೆದು ಬೇರೆ ಪ್ರವಾಸಿಗರೂ ಅದೇ ಟಿಕೆಟ್ ಮಾರಾಟ ಮಾಡುತ್ತಿದ್ದಾರೆ ಎಂಬುದು ತಿಳಿಯಿತು. ಈ ಬಗ್ಗೆ ಪ್ರಶ್ನಿಸಿದರೆ ಅಲ್ಲಿನ ಸಿಬ್ಬಂದಿ ಏರುಧ್ವನಿಯಲ್ಲಿ ಮಾತನಾಡುತ್ತಾರೆ.
ಒಂದೇ ಟಿಕೆಟನ್ನು ಪದೇ ಪದೇ ಮಾರಾಟ ಮಾಡಿ ಹಣ ಗಳಿಸುತ್ತಿರುವುದು ವಂಚನೆಯಲ್ಲವೇ? ದಸರಾ ಎಂದರೆ ಅಕ್ರಮ ವಾಗಿ ಹಣ ಗಳಿಸಲು ಇರುವ ಮಾರ್ಗವೇ? ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದರೆ ಅಲ್ಲಿನ ಸಿಬ್ಬಂದಿ ಜಗಳಕ್ಕೆ ಬರುತ್ತಾರೆ. ಆದ್ದರಿಂದ ಜಿಲ್ಲಾಧಿಕಾರಿಗಳು ಹಾಗೂ ದಸರಾ ಆಚರಣಾ ಸಮಿತಿ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಬೇಕಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ವಿ. ಗುರುದತ್ತ, ಮೈಸೂರು.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…