Andolana originals

ಓದುಗರ ಪತ್ರ: ಇದೇನು ಹಣ ಗಳಿಸುವ ಮಾರ್ಗವೇ?

ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಲಿಂಗಾಂಬುಧಿ ಕೆರೆಯ ಸಮೀಪದ ಸಸ್ಯೋದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಇಲ್ಲಿ ಯಾವುದೇ ಡಿಜಿಟಲ್ ಸೌಲಭ್ಯವಿಲ್ಲದಿರುವುದರಿಂದ ಬರುವ ಪ್ರವಾಸಿಗರು ಹಣ ನೀಡಿಯೇ ಟಿಕೆಟ್ ಪಡೆಯ ಬೇಕು.

ಇದರಿಂದಾಗಿ ಅನೇಕ ಪ್ರವಾಸಿಗರಿಗೆ ತೊಂದರೆ ಯಾಗುತ್ತಿದೆ. ಇನ್ನು ಇಲ್ಲಿ ನಾವು ಪ್ರವೇಶ ಮಾಡುವ ಸಮಯ ಒಂದಾಗಿದ್ದರೆ ಅವರು ಟಿಕೆಟ್‌ನಲ್ಲಿ ನಮೂದಿಸುವ ಸಮಯವೇ ಬೇರೆಯಾಗಿರುತ್ತದೆ. ಇದು ಹೇಗೆ ಎಂದು ನೋಡಿದಾಗ, ಅಲ್ಲಿ ನಮಗೆ ನೀಡಿದ ಟಿಕೆಟನ್ನು ವಾಪಸ್ ಪಡೆದು ಬೇರೆ ಪ್ರವಾಸಿಗರೂ ಅದೇ ಟಿಕೆಟ್ ಮಾರಾಟ ಮಾಡುತ್ತಿದ್ದಾರೆ ಎಂಬುದು ತಿಳಿಯಿತು. ಈ ಬಗ್ಗೆ ಪ್ರಶ್ನಿಸಿದರೆ ಅಲ್ಲಿನ ಸಿಬ್ಬಂದಿ ಏರುಧ್ವನಿಯಲ್ಲಿ ಮಾತನಾಡುತ್ತಾರೆ.

ಒಂದೇ ಟಿಕೆಟನ್ನು ಪದೇ ಪದೇ ಮಾರಾಟ ಮಾಡಿ ಹಣ ಗಳಿಸುತ್ತಿರುವುದು ವಂಚನೆಯಲ್ಲವೇ? ದಸರಾ ಎಂದರೆ ಅಕ್ರಮ ವಾಗಿ ಹಣ ಗಳಿಸಲು ಇರುವ ಮಾರ್ಗವೇ? ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದರೆ ಅಲ್ಲಿನ ಸಿಬ್ಬಂದಿ ಜಗಳಕ್ಕೆ ಬರುತ್ತಾರೆ. ಆದ್ದರಿಂದ ಜಿಲ್ಲಾಧಿಕಾರಿಗಳು ಹಾಗೂ ದಸರಾ ಆಚರಣಾ ಸಮಿತಿ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಬೇಕಿದೆ.

 

-ಶಿವಮೊಗ್ಗ ನಾ. ದಿನೇಶ್ ಅಡಿಗ, ವಿ. ಗುರುದತ್ತ, ಮೈಸೂರು.

 

andolana

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

44 mins ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago