ಓದುಗರ ಪತ್ರ
ನಾಡ ಹಬ್ಬ ದಸರಾ ಹಿನ್ನೆಲೆಯಲ್ಲಿ ಅರಮನೆ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಮೂಲೆಗಳಿಂದ ಮೈಸೂರಿಗೆ ಜನಸಮೂಹ ಹರಿದು ಬರುತ್ತಿದೆ. ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಲಲಿತ ಕಲೆಗಳ ಪ್ರದರ್ಶನ, ವಸ್ತು ಪ್ರದರ್ಶನ ಹಾಗೂ ಇನ್ನಿತರ ಕಣ್ಮನ ಸೆಳೆಯುವ ಮತ್ತು ಮನರಂಜನೆಯ ಕಾರ್ಯಕ್ರಮಗಳು ಜರುಗುತ್ತಿವೆ. ಆದರೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಪುಸ್ತಕ ಮೇಳಕ್ಕೆ ನಿರೀಕ್ಷೆಯ ಮಟ್ಟದಲ್ಲಿ ಜನ ಭೇಟಿ ನೀಡದೆ ಇರುವುದು ಬೇಸರದ ಸಂಗತಿ.
ಕನ್ನಡ ಪುಸ್ತಕಗಳ ಓದುಗರ ಸಂಖ್ಯೆ ಕಡಿಮೆಯಾಗಿದೆಯೇನೋ ಎಂಬ ಆತಂಕ ಮೂಡುತ್ತದೆ. ಇಂದಿನ ಯುವಸಮೂಹ ಸಾಮಾಜಿಕ ಮಾಧ್ಯಮಗಳಿಂದ ಪ್ರಭಾವಿತರಾಗಿ ಅದರಲ್ಲೇ ಹೆಚ್ಚು ಸಮಯ ಕಳೆಯುತ್ತಿರುತ್ತಾರೆ. ಇದರ ಜೊತೆಯಲ್ಲೇ ಕನ್ನಡ ಪುಸ್ತಕ ಓದುವ ಹವ್ಯಾಸ ಮತ್ತು ಸಾಹಿತ್ಯಾಸಕ್ತಿಯನ್ನೂ ಬೆಳೆಸಿಕೊಂಡರೆ ಕನ್ನಡ ಭಾಷೆಯ ಉಳಿವಿಗೆ ಮತ್ತಷ್ಟು ಬೆಳವಣಿಗೆಗೆ ಪುಷ್ಟಿ ದೊರೆತಂತಾಗುತ್ತದೆ.
– ಎಂ.ಪಿ.ದರ್ಶನ್ ಚಂದ್ರ, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…