ಓದುಗರ ಪತ್ರ
ನಾಡ ಹಬ್ಬ ದಸರಾ ಹಿನ್ನೆಲೆಯಲ್ಲಿ ಅರಮನೆ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಮೂಲೆಗಳಿಂದ ಮೈಸೂರಿಗೆ ಜನಸಮೂಹ ಹರಿದು ಬರುತ್ತಿದೆ. ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಲಲಿತ ಕಲೆಗಳ ಪ್ರದರ್ಶನ, ವಸ್ತು ಪ್ರದರ್ಶನ ಹಾಗೂ ಇನ್ನಿತರ ಕಣ್ಮನ ಸೆಳೆಯುವ ಮತ್ತು ಮನರಂಜನೆಯ ಕಾರ್ಯಕ್ರಮಗಳು ಜರುಗುತ್ತಿವೆ. ಆದರೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಪುಸ್ತಕ ಮೇಳಕ್ಕೆ ನಿರೀಕ್ಷೆಯ ಮಟ್ಟದಲ್ಲಿ ಜನ ಭೇಟಿ ನೀಡದೆ ಇರುವುದು ಬೇಸರದ ಸಂಗತಿ.
ಕನ್ನಡ ಪುಸ್ತಕಗಳ ಓದುಗರ ಸಂಖ್ಯೆ ಕಡಿಮೆಯಾಗಿದೆಯೇನೋ ಎಂಬ ಆತಂಕ ಮೂಡುತ್ತದೆ. ಇಂದಿನ ಯುವಸಮೂಹ ಸಾಮಾಜಿಕ ಮಾಧ್ಯಮಗಳಿಂದ ಪ್ರಭಾವಿತರಾಗಿ ಅದರಲ್ಲೇ ಹೆಚ್ಚು ಸಮಯ ಕಳೆಯುತ್ತಿರುತ್ತಾರೆ. ಇದರ ಜೊತೆಯಲ್ಲೇ ಕನ್ನಡ ಪುಸ್ತಕ ಓದುವ ಹವ್ಯಾಸ ಮತ್ತು ಸಾಹಿತ್ಯಾಸಕ್ತಿಯನ್ನೂ ಬೆಳೆಸಿಕೊಂಡರೆ ಕನ್ನಡ ಭಾಷೆಯ ಉಳಿವಿಗೆ ಮತ್ತಷ್ಟು ಬೆಳವಣಿಗೆಗೆ ಪುಷ್ಟಿ ದೊರೆತಂತಾಗುತ್ತದೆ.
– ಎಂ.ಪಿ.ದರ್ಶನ್ ಚಂದ್ರ, ಮೈಸೂರು
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…