ಓದುಗರ ಪತ್ರ
ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಾರೆ. ಆದರೆ ಕಾಲೇಜಿನ ಕ್ರೀಡಾಂಗಣವನ್ನು ಇತ್ತೀಚಿನ ದಿನಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನೀಡುತ್ತಿರುವುದರಿಂದ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ ನಡೆಸಲು ತೀವ್ರ ತೊಂದರೆಯಾಗಿದೆ.
ಕ್ರೀಡಾಂಗಣವನ್ನು ಕಾರ್ಯಕ್ರಮಗಳಿಗೆ ಬಾಡಿಗೆ ಪಡೆಯುವ ಸಂಘ ಸಂಸ್ಥೆಗಳು ದೊಡ್ಡ ಸ್ಪೀಕರ್ಗಳನ್ನು ಅಳವಡಿಸಿ ಕಾರ್ಯಕ್ರಮಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತದೆ. ಕೆಲವೊಮ್ಮೆ ಕಾರ್ಯಕ್ರಮಗಳಿಗೆ ವಾಹನದಲ್ಲಿ ಬರುವವರು ಕಾಲೇಜು ಆವರಣದಲ್ಲೇ ವಾಹನಗಳನ್ನು ನಿಲುಗಡೆ ಮಾಡುವುದರಿಂದ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ತಮ್ಮ ವಾಹನಗಳನ್ನು ನಿಲುಗಡೆ ಮಾಡಲು ಹಾಗೂ ಓಡಾಡಲೂ ಜಾಗವಿಲ್ಲದಂತಾಗಿದೆ.
ಕಾರ್ಯಕ್ರಮದ ನಂತರ ಊಟ ಮಾಡಿದ ತಟ್ಟೆ, ಕುಡಿಯುವ ನೀರಿನ ಲೋಟಗಳನ್ನು ಎಲ್ಲೆಂದರಲ್ಲಿ ಬಿಸಾಡುವುದರಿಂದ ಕ್ರೀಡಾಚಟುವಟಿಕೆ ನಡೆಸುವ ವಿದ್ಯಾರ್ಥಿಗಳು ಹಾಗೂ ಪ್ರತಿನಿತ್ಯ ವಾಯು ವಿಹಾರ ನಡೆಸುವ ಸಾರ್ವಜನಿಕರಿಗೂ ಇದರಿಂದ ತೊಂದರೆಯಾಗಿದೆ. ಮೈಸೂರು ವಿಶ್ವವಿದ್ಯಾನಿಲಯದ ಸಂಬಂಧಪಟ್ಟ ಅಽಕಾರಿಗಳು ಕ್ರೀಡಾಂಗಣವನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಬಾಡಿಗೆಗೆ ನೀಡದೇ ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಮೀಸಲಿಡಲು ಕ್ರಮ ಕೈಗೊಳ್ಳಬೇಕು.
– ವಿ.ಬಬಿತ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…