ಓದುಗರ ಪತ್ರ
ಮೈಸೂರು ಮಹಾನಗರ ಪಾಲಿಕೆಯವರು ಕೋಟ್ಯಂತರ ರೂ. ವ್ಯಯಿಸಿ ನಗರದ ವಿವಿಧ ಭಾಗಗಳಲ್ಲಿ ಬಸ್ ತಂಗುದಾಣಗಳನ್ನು ನಿರ್ಮಿಸಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಕೆಲವು ತಂಗುದಾಣಗಳು ಪ್ರಯಾಣಿಕರ ಉಪಯೋಗದಿಂದ ದೂರಾಗಿದೆ.
ನಗರದ ಟಿ.ಕೆ.ಲೇಔಟ್ನ ಜಂಕ್ಷನ್ ಬಳಿ ಇರುವ ಬಸ್ ತಂಗುದಾಣದಲ್ಲಿ ಅನಾರೋಗ್ಯ ಪೀಡಿತರು, ನಿರ್ಗತಿಕರು ವಾಸ್ತವ್ಯ ಹೂಡಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಬಸ್ ತಂಗುದಾಣದ ಸುತ್ತ ಗಿಡಗಂಟಿಗಳು ಬೆಳೆದುಕೊಂಡಿದ್ದು, ಕೆಲವರು ಅಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಾರೆ. ಇದರಿಂದಾಗಿ ತಂಗುದಾಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ದುರ್ವಾಸನೆ ಬೀರುತ್ತಿದೆ. ತಂಗುದಾಣವನ್ನು ಸಂಪೂರ್ಣವಾಗಿ ನಿರ್ಗತಿಕರೇ ಆಕ್ರಮಿಸಿಕೊಂಡಿರುವುದರಿಂದ ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ತಂಗುದಾಣದ ಒಳಗೆ ಹೋಗಲಾಗದೆ ಹೊರಗೇ ನಿಂತು ಬಸ್ಗಾಗಿ ಕಾಯಬೇಕಾಗಿದೆ. ಆದ್ದರಿಂದ ಕೂಡಲೇ ಮಹಾನಗರ ಪಾಲಿಕೆಯವರು ಅಲ್ಲಿರುವ ನಿರ್ಗತಿಕರಿಗೆ ಬೇರೆಡೆ ಸೂಕ್ತ ಆಶ್ರಯ ನೀಡಿ ಬಸ್ ತಂಗುದಾಣದಲ್ಲಿ ಸ್ವಚ್ಛತೆ ಕಾಪಾಡಬೇಕಿದೆ.
-ರಾಜು.ಸಿ ಮುತ್ತು, ಬಿ.ಗುಂಡಾಪುರ, ಕೊಳ್ಳೇಗಾಲ ತಾ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…