ಓದುಗರ ಪತ್ರ
ಮೈಸೂರು ಮಹಾನಗರ ಪಾಲಿಕೆಯವರು ಕೋಟ್ಯಂತರ ರೂ. ವ್ಯಯಿಸಿ ನಗರದ ವಿವಿಧ ಭಾಗಗಳಲ್ಲಿ ಬಸ್ ತಂಗುದಾಣಗಳನ್ನು ನಿರ್ಮಿಸಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಕೆಲವು ತಂಗುದಾಣಗಳು ಪ್ರಯಾಣಿಕರ ಉಪಯೋಗದಿಂದ ದೂರಾಗಿದೆ.
ನಗರದ ಟಿ.ಕೆ.ಲೇಔಟ್ನ ಜಂಕ್ಷನ್ ಬಳಿ ಇರುವ ಬಸ್ ತಂಗುದಾಣದಲ್ಲಿ ಅನಾರೋಗ್ಯ ಪೀಡಿತರು, ನಿರ್ಗತಿಕರು ವಾಸ್ತವ್ಯ ಹೂಡಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಬಸ್ ತಂಗುದಾಣದ ಸುತ್ತ ಗಿಡಗಂಟಿಗಳು ಬೆಳೆದುಕೊಂಡಿದ್ದು, ಕೆಲವರು ಅಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಾರೆ. ಇದರಿಂದಾಗಿ ತಂಗುದಾಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ದುರ್ವಾಸನೆ ಬೀರುತ್ತಿದೆ. ತಂಗುದಾಣವನ್ನು ಸಂಪೂರ್ಣವಾಗಿ ನಿರ್ಗತಿಕರೇ ಆಕ್ರಮಿಸಿಕೊಂಡಿರುವುದರಿಂದ ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ತಂಗುದಾಣದ ಒಳಗೆ ಹೋಗಲಾಗದೆ ಹೊರಗೇ ನಿಂತು ಬಸ್ಗಾಗಿ ಕಾಯಬೇಕಾಗಿದೆ. ಆದ್ದರಿಂದ ಕೂಡಲೇ ಮಹಾನಗರ ಪಾಲಿಕೆಯವರು ಅಲ್ಲಿರುವ ನಿರ್ಗತಿಕರಿಗೆ ಬೇರೆಡೆ ಸೂಕ್ತ ಆಶ್ರಯ ನೀಡಿ ಬಸ್ ತಂಗುದಾಣದಲ್ಲಿ ಸ್ವಚ್ಛತೆ ಕಾಪಾಡಬೇಕಿದೆ.
-ರಾಜು.ಸಿ ಮುತ್ತು, ಬಿ.ಗುಂಡಾಪುರ, ಕೊಳ್ಳೇಗಾಲ ತಾ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…