ಬಂಡೀಪುರ ಅಭಯಾರಣ್ಯದ ನಡುವೆ ಹಾದು ಹೋಗಿರುವ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ತೆರವು ಬೇಡ ಎಂದು ಚಾಮರಾಜನಗರದಲ್ಲಿ ಪರಿಸರವಾದಿಗಳು ಪ್ರತಿಭಟನೆ ನಡೆಸಿರುವುದು ಶ್ಲಾಘನೀಯ.ಇತ್ತೀಚಿನ ವರ್ಷಗಳಲ್ಲಿ ನಮ್ಮ ರಾಜ್ಯದ ಅರಣ್ಯಗಳಲ್ಲಿ ಹುಲಿಗಳ ಸಂತತಿ ಕ್ಷೀಣಿಸುತ್ತಾ ಬಂದಿರುವುದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಗೊತ್ತಿದ್ದರೂ, ಇತ್ತೀಚೆಗೆ ದಿಲ್ಲಿಯಲ್ಲಿ ಬಂಡೀಪುರ ಪ್ರದೇಶದಲ್ಲಿ ಹಾದು ಹೋಗುವ ಎರಡು ಹೆದ್ದಾರಿಗಳಲ್ಲಿ ರಾತ್ರಿ ಸಂಚಾರ ನಿಷೇಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು ಮುಖ್ಯಮಂತ್ರಿ ಜೊತೆ ಸಮಾ ಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿರುವುದು ತುಂಬಾ ಬೇಸರದ ವಿಷಯ. ವಯನಾಡು ಸಂಸದೆ ಪ್ರಿಯಾಂಕ ಗಾಂಧಿ ಅವರು ಲೋಕಸಭಾ ಉಪಚುನಾವಣೆ ವೇಳೆ ಜನತೆಗೆ ನೀಡಿರುವ ಆಶ್ವಾಸನೆಯನ್ನು ಈಡೇರಿಸುವ ಸಲುವಾಗಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ, ವನ್ಯಜೀವಿಗಳ ನೆಮ್ಮದಿಗೆ ಭಂಗ ಬರಲಿದೆ. ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರಾಜ್ಯ ಸರ್ಕಾರ ಯಾರ,ಯಾವ ಒತ್ತಡಕ್ಕೂ ಮಣಿಯದೆ, ಬಂಡೀಪುರ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ಮುಂದುವರಿಸುವುದು ಸೂಕ್ತ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಈ ಬಗ್ಗೆ…
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…