ಬಂಡೀಪುರ ಅಭಯಾರಣ್ಯದ ನಡುವೆ ಹಾದು ಹೋಗಿರುವ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ತೆರವು ಬೇಡ ಎಂದು ಚಾಮರಾಜನಗರದಲ್ಲಿ ಪರಿಸರವಾದಿಗಳು ಪ್ರತಿಭಟನೆ ನಡೆಸಿರುವುದು ಶ್ಲಾಘನೀಯ.ಇತ್ತೀಚಿನ ವರ್ಷಗಳಲ್ಲಿ ನಮ್ಮ ರಾಜ್ಯದ ಅರಣ್ಯಗಳಲ್ಲಿ ಹುಲಿಗಳ ಸಂತತಿ ಕ್ಷೀಣಿಸುತ್ತಾ ಬಂದಿರುವುದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಗೊತ್ತಿದ್ದರೂ, ಇತ್ತೀಚೆಗೆ ದಿಲ್ಲಿಯಲ್ಲಿ ಬಂಡೀಪುರ ಪ್ರದೇಶದಲ್ಲಿ ಹಾದು ಹೋಗುವ ಎರಡು ಹೆದ್ದಾರಿಗಳಲ್ಲಿ ರಾತ್ರಿ ಸಂಚಾರ ನಿಷೇಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು ಮುಖ್ಯಮಂತ್ರಿ ಜೊತೆ ಸಮಾ ಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿರುವುದು ತುಂಬಾ ಬೇಸರದ ವಿಷಯ. ವಯನಾಡು ಸಂಸದೆ ಪ್ರಿಯಾಂಕ ಗಾಂಧಿ ಅವರು ಲೋಕಸಭಾ ಉಪಚುನಾವಣೆ ವೇಳೆ ಜನತೆಗೆ ನೀಡಿರುವ ಆಶ್ವಾಸನೆಯನ್ನು ಈಡೇರಿಸುವ ಸಲುವಾಗಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ, ವನ್ಯಜೀವಿಗಳ ನೆಮ್ಮದಿಗೆ ಭಂಗ ಬರಲಿದೆ. ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರಾಜ್ಯ ಸರ್ಕಾರ ಯಾರ,ಯಾವ ಒತ್ತಡಕ್ಕೂ ಮಣಿಯದೆ, ಬಂಡೀಪುರ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ಮುಂದುವರಿಸುವುದು ಸೂಕ್ತ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…