ಓದುಗರ ಪತ್ರ
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ ಪ್ಲಾಟ್ ಫಾರ್ಮ್ಗಳಿಗೆ, ಪ್ರಯಾಣಿಕರು ಹೋಗಲು, ಹಿರಿಯ ನಾಗರಿಕರು ಹೆಂಗಸರು ಮಕ್ಕಳು ಈ ಎಸ್ಕಲೇಟರ್ನ್ನು ಉಪಯೋಗಿಸುತ್ತಾರೆ. ಆದರೆ ದಿನದ ಬಹುಪಾಲು ಸಮಯದಲ್ಲಿ ಈ ಎಸ್ಕಲೇಟರ್ ಚಾಲನೆಯಲ್ಲಿರುವುದಿಲ್ಲ. ಬೆಳಿಗ್ಗೆ ಒಂದೆರಡು ಗಂಟೆಗಳ ಕಾಲ ಮಾತ್ರ ಕಾರ್ಯನಿರ್ವಹಿಸುತ್ತದೆ. ಇದರಿಂದಾಗಿ, ಹಿರಿಯ ನಾಗರಿಕರು, ಹೆಂಗಸರು, ಮಕ್ಕಳು ಹಂತಗಳನ್ನು ಹತ್ತಿಯೇ ಹೋಗಬೇಕು. ಇದರಿಂದಾಗಿ ಕೆಲವು ಸಲ ರೈಲುಗಳನ್ನು ಸರಿಯಾದ ಸಮಯಕ್ಕೆ ಹಿಡಿಯಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಈ ಎಸ್ಕಲೇಟರ್ನ ಕೀ ಇಲ್ಲಿನ ಕಾವಲುಗಾರನ ಬಳಿ ಇರುತ್ತದೆ. ಆತ ಕಾಫಿ -ಟೀ ಗೆ ಹೋದಾಗ ಈ ಸಮಸ್ಯೆ ಇದೆ ಎನ್ನುತ್ತಾರೆ. ಆದರೆ ಇತ್ತೀಚೆಗೆ ಈ ಎಸ್ಕಲೇಟರ್ ಸರಿಯಾಗಿ ಚಾಲನೆಯಲ್ಲಿರುವುದಿಲ್ಲ, ದಿನದ ೨೪ ಗಂಟೆಯೂ ಈ ಎಸ್ಕಲೇಟರ್ ಚಾಲನೆಯಲ್ಲಿ ಇರುವಂತೆ ರೈಲ್ವೆ ಅಽಕಾರಿಗಳು ಕ್ರಮಕೈಗೊಳ್ಳಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…