ಓದುಗರ ಪತ್ರ
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ ಪ್ಲಾಟ್ ಫಾರ್ಮ್ಗಳಿಗೆ, ಪ್ರಯಾಣಿಕರು ಹೋಗಲು, ಹಿರಿಯ ನಾಗರಿಕರು ಹೆಂಗಸರು ಮಕ್ಕಳು ಈ ಎಸ್ಕಲೇಟರ್ನ್ನು ಉಪಯೋಗಿಸುತ್ತಾರೆ. ಆದರೆ ದಿನದ ಬಹುಪಾಲು ಸಮಯದಲ್ಲಿ ಈ ಎಸ್ಕಲೇಟರ್ ಚಾಲನೆಯಲ್ಲಿರುವುದಿಲ್ಲ. ಬೆಳಿಗ್ಗೆ ಒಂದೆರಡು ಗಂಟೆಗಳ ಕಾಲ ಮಾತ್ರ ಕಾರ್ಯನಿರ್ವಹಿಸುತ್ತದೆ. ಇದರಿಂದಾಗಿ, ಹಿರಿಯ ನಾಗರಿಕರು, ಹೆಂಗಸರು, ಮಕ್ಕಳು ಹಂತಗಳನ್ನು ಹತ್ತಿಯೇ ಹೋಗಬೇಕು. ಇದರಿಂದಾಗಿ ಕೆಲವು ಸಲ ರೈಲುಗಳನ್ನು ಸರಿಯಾದ ಸಮಯಕ್ಕೆ ಹಿಡಿಯಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಈ ಎಸ್ಕಲೇಟರ್ನ ಕೀ ಇಲ್ಲಿನ ಕಾವಲುಗಾರನ ಬಳಿ ಇರುತ್ತದೆ. ಆತ ಕಾಫಿ -ಟೀ ಗೆ ಹೋದಾಗ ಈ ಸಮಸ್ಯೆ ಇದೆ ಎನ್ನುತ್ತಾರೆ. ಆದರೆ ಇತ್ತೀಚೆಗೆ ಈ ಎಸ್ಕಲೇಟರ್ ಸರಿಯಾಗಿ ಚಾಲನೆಯಲ್ಲಿರುವುದಿಲ್ಲ, ದಿನದ ೨೪ ಗಂಟೆಯೂ ಈ ಎಸ್ಕಲೇಟರ್ ಚಾಲನೆಯಲ್ಲಿ ಇರುವಂತೆ ರೈಲ್ವೆ ಅಽಕಾರಿಗಳು ಕ್ರಮಕೈಗೊಳ್ಳಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…