ಓದುಗರ ಪತ್ರ
ಮೈಸೂರಿನ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯ ಎನ್.ಆರ್.ಮೊಹಲ್ಲಾದ ಗಣೇಶ ನಗರದಲ್ಲಿರುವ ಹಿಂದೂ ರುದ್ರಭೂಮಿ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.
ರುದ್ರಭೂಮಿಯಲ್ಲಿ ಗಿಡಗಂಟಿಗಳು ಆಳೆತ್ತರ ಬೆಳೆದು ನಿಂತಿದ್ದು, ಶವ ಹೂಳುವವರು ಜಾಗಕ್ಕಾಗಿ ಪರದಾಡುವಂತಾಗಿದೆ. ಶವ ಸಂಸ್ಕಾರ ನಡೆಸಿದವರು ಚಟ್ಟ, ಮೃತರ ಹಾಸಿಗೆ, ಹೊದಿಕೆಗಳನ್ನು ಅರೆ ಬರೆ ಸುಟ್ಟು ಅಲ್ಲೇ ಬಿಸಾಡುವುದರಿಂದ ಕಾಲಿಡಲೂ ಜಾಗವಿಲ್ಲದಂತಾಗಿದೆ. ಜತೆಗೆ ರುದ್ರಭೂಮಿಗೆ ಸೆಕ್ಯೂರಿಟಿ ಗಾರ್ಡ್ ಇಲ್ಲದ್ದರಿಂದ ಮದ್ಯಪಾನ, ಇಸ್ಟೀಟ್ ಜೂಜು, ಮಾದಕ ಪದಾರ್ಥಗಳ ಸೇವನೆಯ ತಾಣವಾಗಿ ಮಾರ್ಪಟ್ಟಿದ್ದು, ರುದ್ರಭೂಮಿಯ ನಾಮ-ಲಕವೂ ಸ್ಪಷ್ಟವಾಗಿ ಕಾಣದಂತಿದೆ.
ಶವ ಸುಡುವ ಯಂತ್ರ ಸಮರ್ಪಕ ನಿರ್ವಹಣೆ ಇಲ್ಲದೇ ತುಕ್ಕು ಹಿಡಿದಿರುವುದರಿಂದ ಶವ ಸುಡಲು ಅವಕಾಶವಿಲ್ಲದಂತಾಗಿದೆ. ಸಂಬಂಧಪಟ್ಟವರು ಇತ್ತ ಗಮನಹರಿಸಿ ರುದ್ರಭೂಮಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕಾಗಿದೆ.
-ಕೆ.ಅಭಿನಂದ , ಎನ್.ಆರ್.ಮೊಹಲ್ಲಾ, ಮೈಸೂರು
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…